ಸಂಗ್ರಹ ಚಿತ್ರ 
ರಾಜ್ಯ

ಕಾರವಾರ: ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

ಗೋಕರ್ಣ ಬೀಚ್‌ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. 

ಕಾರವಾರ: ಇಲ್ಲಿನ ಗೋಕರ್ಣ ಬೀಚ್‌ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋಮವಾರ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಆಗಮಿಸಿದ್ದ ಯುವಕರು ಸಮುದ್ರ ತೀರದಲ್ಲಿ ಈಜುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ.

ರಕ್ಷಿಸಲಾದ ಯುವಕರನ್ನು ರಿತುರಾಜ್ (26), ಶ್ರೀಖಾಂಶು ಗುಪ್ತಾ (28), ಪ್ರಶಾಂತ್ ಚಂದ್ರಶೇಖರ್ (28) ಮತ್ತು ಆರುಷಿ ಬನ್ಸಾಲ್ (27) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನಲ್ಲಿ ಉದ್ಯೋಗಿಗಳಾಗಿದ್ದು, ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು.

ಅವರು ಸಂಕಷ್ಟದಲ್ಲಿದ್ದುದನ್ನು ಗಮನಿಸಿದ ಜೀವ ರಕ್ಷಕ ತಂಡ ಕೂಡಲೇ ಅವರನ್ನು ರಕ್ಷಿಸಿದ್ದಾರೆ. ಕಡಲತೀರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಗೋಕರ್ಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT