ಸಂಗ್ರಹ ಚಿತ್ರ 
ರಾಜ್ಯ

ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿ ಕಟ್ಟುನಿಟ್ಟಾಗಿ ಪಾಲಿಸಿ: ಪೊಲೀಸ್ ಸಿಬ್ಬಂದಿಗೆ ಅಲೋಕ್ ಕುಮಾರ್ ಸೂಚನೆ

ಹೆದ್ದಾರಿಗಳಲ್ಲಿ ಪೊಲೀಸ್ ವಾಹನಗಳೇ ನಿಯಮ ಉಲ್ಲಂಘಿಸುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಎಲ್ಲಾ ವರ್ಗದ ಪೊಲೀಸ್ ವಾಹನಗಳು ನಿಗದಿತ ವೇಗದ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

ಬೆಂಗಳೂರು: ಹೆದ್ದಾರಿಗಳಲ್ಲಿ ಪೊಲೀಸ್ ವಾಹನಗಳೇ ನಿಯಮ ಉಲ್ಲಂಘಿಸುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಎಲ್ಲಾ ವರ್ಗದ ಪೊಲೀಸ್ ವಾಹನಗಳು ನಿಗದಿತ ವೇಗದ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

ಈ ಸಂಬಂಧ ಅಲೋಕ್ ಕುಮಾರ್ ಅವರು ಮಂಗಳವಾರ ಸುತ್ತೋಲೆಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗರಿಷ್ಠ ಚಾಲನಾ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಈ ಹೆದ್ದಾರಿಗಳಲ್ಲಿನ ಎಲ್ಲಾ ವಾಹನಗಳನ್ನು ಅವುಗಳಿಗೆ ನಿಗದಿಪಡಿಸಿದ ಗರಿಷ್ಠ ವೇಗದ ಮಿತಿಗಿಂತ ಕಡಿಮೆ ಚಾಲನೆ ಮಾಡಬೇಕಾಗುತ್ತದೆ.

"ಆದಾಗ್ಯೂ, ಕೆಲವೊಮ್ಮೆ ವಿವಿಧ ವರ್ಗದ ಪೊಲೀಸ್ ವಾಹನಗಳನ್ನು ಗರಿಷ್ಠ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿ ಓಡಾಡುತ್ತಿರುವುದು ವರದಿಯಾಗುತ್ತಿರುವುದು ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಘಟಕದ ಅಧಿಕಾರಿಗಳು ತಮ್ಮ ಘಟಕಗಳಲ್ಲಿನ ಪೊಲೀಸ್ ವಾಹನಗಳು ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳಿಗೆ ನಿಗದಿಪಡಿಸಿದ ವೇಗದ ಮಿತಿಯನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಈ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಯನ್ನು ಮೀರಿ ಯಾವುದೇ ವರ್ಗದ ಪೊಲೀಸ್ ವಾಹನಗಳು ವೇಗವಾಗಿ ಚಲಿಸುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಎಲ್ಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT