ರಾಜ್ಯ

ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿ ಕಟ್ಟುನಿಟ್ಟಾಗಿ ಪಾಲಿಸಿ: ಪೊಲೀಸ್ ಸಿಬ್ಬಂದಿಗೆ ಅಲೋಕ್ ಕುಮಾರ್ ಸೂಚನೆ

Manjula VN

ಬೆಂಗಳೂರು: ಹೆದ್ದಾರಿಗಳಲ್ಲಿ ಪೊಲೀಸ್ ವಾಹನಗಳೇ ನಿಯಮ ಉಲ್ಲಂಘಿಸುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಎಲ್ಲಾ ವರ್ಗದ ಪೊಲೀಸ್ ವಾಹನಗಳು ನಿಗದಿತ ವೇಗದ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

ಈ ಸಂಬಂಧ ಅಲೋಕ್ ಕುಮಾರ್ ಅವರು ಮಂಗಳವಾರ ಸುತ್ತೋಲೆಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗರಿಷ್ಠ ಚಾಲನಾ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಈ ಹೆದ್ದಾರಿಗಳಲ್ಲಿನ ಎಲ್ಲಾ ವಾಹನಗಳನ್ನು ಅವುಗಳಿಗೆ ನಿಗದಿಪಡಿಸಿದ ಗರಿಷ್ಠ ವೇಗದ ಮಿತಿಗಿಂತ ಕಡಿಮೆ ಚಾಲನೆ ಮಾಡಬೇಕಾಗುತ್ತದೆ.

"ಆದಾಗ್ಯೂ, ಕೆಲವೊಮ್ಮೆ ವಿವಿಧ ವರ್ಗದ ಪೊಲೀಸ್ ವಾಹನಗಳನ್ನು ಗರಿಷ್ಠ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿ ಓಡಾಡುತ್ತಿರುವುದು ವರದಿಯಾಗುತ್ತಿರುವುದು ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಘಟಕದ ಅಧಿಕಾರಿಗಳು ತಮ್ಮ ಘಟಕಗಳಲ್ಲಿನ ಪೊಲೀಸ್ ವಾಹನಗಳು ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳಿಗೆ ನಿಗದಿಪಡಿಸಿದ ವೇಗದ ಮಿತಿಯನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಈ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಯನ್ನು ಮೀರಿ ಯಾವುದೇ ವರ್ಗದ ಪೊಲೀಸ್ ವಾಹನಗಳು ವೇಗವಾಗಿ ಚಲಿಸುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಎಲ್ಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

SCROLL FOR NEXT