ಯಶವಂತಪುರ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿ 
ರಾಜ್ಯ

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಿಶಾಲವಾದ ಪಾರ್ಕಿಂಗ್ ಸ್ಥಳ ನಿರ್ಮಾಣ!

ಯಶವಂತಪುರ ರೈಲು ನಿಲ್ದಾಣದಲ್ಲಿ 125 ನಾಲ್ಕು ಚಕ್ರಗಳು ಮತ್ತು 90 ದ್ವಿಚಕ್ರ ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುವ ಬಹು ಹಂತದ ಕಾರ್ ಪಾರ್ಕಿಂಗ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಹೆಚ್ಚುವರಿಯಾಗಿ 40 ಆಟೋಗಳು ಅಥವಾ ಕ್ಯಾಬ್‌ಗಳು ಮತ್ತು 50 ದ್ವಿಚಕ್ರ ವಾಹನಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕೂಡ ಸ್ಥಳಾವಕಾಶ ಲಭ್ಯವಿರುತ್ತದೆ.

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ 125 ನಾಲ್ಕು ಚಕ್ರಗಳು ಮತ್ತು 90 ದ್ವಿಚಕ್ರ ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುವ ಬಹು ಹಂತದ ಕಾರ್ ಪಾರ್ಕಿಂಗ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಹೆಚ್ಚುವರಿಯಾಗಿ 40 ಆಟೋಗಳು ಅಥವಾ ಕ್ಯಾಬ್‌ಗಳು ಮತ್ತು 50 ದ್ವಿಚಕ್ರ ವಾಹನಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕೂಡ ಸ್ಥಳಾವಕಾಶ ಲಭ್ಯವಿರುತ್ತದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಈ ಸೌಲಭ್ಯಗಳು ಯಶವಂತಪುರ ರೈಲು ನಿಲ್ದಾಣದ ನವೀಕರಣದ ಭಾಗವಾಗಿದೆ. 6,000 ಚದರ ಮೀಟರ್ ಪಾರ್ಕಿಂಗ್ ಸ್ಥಳವನ್ನು ಒದಗಿಸಲಾಗುವುದು. ಜೊತೆಗೆ ಪಶ್ಚಿಮ ಭಾಗದಲ್ಲಿ (ಮೆಟ್ರೋ ಬದಿ ಅಥವಾ ಫ್ಲಾಟ್‌ಫಾರ್ಮ್ 6 ಕಡೆಯಲ್ಲಿ) ಹೆಚ್ಚುವರಿಯಾಗಿ ತೆರೆದ ನೆಲಮಾಳಿಗೆಯಲ್ಲಿ 1200 ಚದರ ಮೀಟರ್ ಜಾಗ ಪಾರ್ಕಿಂಗ್‌ಗೆ ಲಭ್ಯವಿರುತ್ತದೆ. 

2023ರ ಫೆಬ್ರುವರಿಯಲ್ಲಿ ಪ್ರಾರಂಭವಾದ ಪುನರಾಭಿವೃದ್ಧಿ ಯೋಜನೆಯನ್ನು 380 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಜುಲೈ 2025 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

'ಹಂತ-1ರ ಭಾಗವಾಗಿ, ಪೂರ್ವ ಭಾಗದಲ್ಲಿ (ಫ್ಲಾಟ್‌ಫಾರ್ಮ್ 1) ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಬಹು ಹಂತದ ಕಾರ್ ಪಾರ್ಕಿಂಗ್ (G+5) ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅನುಕೂಲವಾಗುವ ಎಲಿವೇಟೆಡ್ ರಸ್ತೆಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಪ್ರಯಾಣಿಕರ ದಟ್ಟಣೆ ತಡೆಗೆ ನಿಲ್ದಾಣದ ಆಗಮನ-ನಿರ್ಗಮನ ದ್ವಾರಗಳನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಅದು ಹೇಳಿದೆ. 

ಪೂರ್ವ ಭಾಗದ ಕಾಮಗಾರಿ ಪೂರ್ಣಗೊಂಡ ನಂತರ, ಪಶ್ಚಿಮ ಭಾಗದ (ಮೆಟ್ರೋ ಕಡೆಗೆ) ಕೆಲಸ ಪ್ರಾರಂಭವಾಗಲಿದೆ. ವಾಹನಗಳಿಗೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ಕೇಂದ್ರಗಳಿರುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT