ಅಪಘಾತಕ್ಕೊಳಗಾದ ಬೈಕ್ 
ರಾಜ್ಯ

ಬೆಂಗಳೂರು: ಮದ್ಯದ ಅಮಲು, ಅತಿವೇಗದ ಚಾಲನೆ; ಕಂಬಕ್ಕೆ BMW ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು 31 ವರ್ಷದ ಮನಮೋಹನ್ ಹಾಗೂ 25 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.

ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು 31 ವರ್ಷದ ಮನಮೋಹನ್ ಹಾಗೂ 25 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ.

ಯುವಕರು ಬಿಎಂಡಬ್ಲ್ಯೂ ಬೈಕ್‌ ಚಲಾಯಿಸುತ್ತಿದ್ದರು. ಯಶವಂತಪುರದಿಂದ ಆರ್‌ಎಮ್‌ಸಿ ಯಾರ್ಡ್ ರೋಡ್ ಕಡೆ ಡ್ರೈವ್ ಮಾಡುತ್ತಿದ್ದ ಇವರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಚಾಲನೆ ಮಾಡಿದ್ದುದು ಗೊತ್ತಾಗಿದೆ. ಇಬ್ಬರೂ ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ಮನಮೋಹನ್, ನಿಖಿಲ್ ವಾಪಸ್ ಬರುತ್ತಿದ್ದರು.

ವೇಗದಿಂದಾಗಿ ನಿಯಂತ್ರಣ ಸಿಗದೆ ಬೈಕ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರೂ ಬೈಕ್‌ನಿಂದ ದೂರಕ್ಕೆ ಹಾರಿಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮನಮೋಹನ್ ಬನಶಂಕರಿ ನಿವಾಸಿ ಎಂಬ ಮಾಹಿತಿ ದೊರೆತಿದೆ. ಇಬ್ಬರ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ