ಸಾಂದರ್ಭಿಕ ಚಿತ್ರ 
ರಾಜ್ಯ

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿ ವಿಸ್ತರಣೆ

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಬೆಂಗಳೂರು: ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು,  ಸಾರ್ವಜನಿಕ ಹಿತದೃಷ್ಟಿಯಿಂದ ಕೆಲಸದ ಅವಧಿಯನ್ನು ವಿಸ್ತರಿಸಲಾಗಿದೆ. 

ಸೆಪ್ಟೆಂಬರ್ 23  ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT