ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕಿರುಕುಳ

ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿನಿಯ ಸಹೋದರ ನೀಡಿದ ದೂರಿನ ಮೇರೆಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಸಹೋದರಿ  ಅನ್ಯ ಸಮುದಾಯಕ್ಕೆ ಸೇರಿದ ಕಾಲೇಜು ಸಹಪಾಠಿ ಜೊತೆಗೆ ಮೋಟಾರ್ ಸೈಕಲ್ ನಲ್ಲಿ ಆಗುಂಬೆಗೆ ಹೋಗಿದ್ದರು. ಅವರು ಹಿಂತಿರುಗುತ್ತಿದ್ದಾಗ ಬಲಪಂಥೀಯ ಕಾರ್ಯಕರ್ತರ ಗುಂಪು ಮೋಟಾರ್ ಸೈಕಲ್ ಅಡ್ಡಗಟ್ಟಿದ್ದಾರೆ ದೂರಿನಲ್ಲಿ ತಿಳಿಸಿದ್ದಾರೆ.ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಹೊರಗೆ ಹೋಗಿದ್ದಕ್ಕಾಗಿ ಅವರು ತನ್ನ ಸಹೋದರಿ ಮೇಲೆ ದೌರ್ಜನ್ಯವೆಸಗಿದ್ದು, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ನೈತಿಕ ಪೊಲೀಸ್ ಗಿರಿಯ ಕಿರುಕುಳವನ್ನು ಹುಡುಗಿಯ ಕಾಲೇಜು ಮೇಟ್ ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ದೂರಿನ ಆಧಾರದ ಮೇಲೆ, ಕಾಪು ಪೊಲೀಸರು ಸೆಕ್ಷನ್ 143 (ಕಾನೂನುಬಾಹಿರ ಸಭೆ) 147 (ಗಲಭೆ) 341 (ತಪ್ಪು ಸಂಯಮ), 505 (2) (ವರ್ಗಗಳ ನಡುವೆ ದ್ವೇಷ, ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) 354 ಡಿ (ಹಿಂಬಾಲಿಸುವುದು) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT