ನಾರಾಯಣ ಹೆಲ್ತ್ ಒಂದು ದಿನದಲ್ಲಿ 3,797 ಇಸಿಜಿಗಳನ್ನು ನಡೆಸಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ 
ರಾಜ್ಯ

24 ಗಂಟೆಗಳಲ್ಲಿ 3,797 ಉಚಿತ ಇಸಿಜಿ: ಗಿನ್ನೆಸ್ ದಾಖಲೆ ನಿರ್ಮಿಸಿದ ನಾರಾಯಣ ಹೆಲ್ತ್

ಹೃದಯ ಸಂಬಂಧಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನವಾಗಿ ಬೆಂಗಳೂರಿನ ನಾರಾಯಣ ಹೆಲ್ತ್ ಸಂಸ್ಥೆ ಮೊನ್ನೆ ಗುರುವಾರ 24 ಗಂಟೆಗಳಲ್ಲಿ 3,797 ಎಲೆಕ್ಟ್ರೋಕಾರ್ಡಿಯೋಗ್ರಾಮ್ (ECG) ಮಾಡಿ ಗಿನ್ನೆಸ್ ದಾಖಲೆ ನಿರ್ಮಿಸಿದೆ.

ಬೆಂಗಳೂರು: ಹೃದಯ ಸಂಬಂಧಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನವಾಗಿ ಬೆಂಗಳೂರಿನ ನಾರಾಯಣ ಹೆಲ್ತ್ ಸಂಸ್ಥೆ ಮೊನ್ನೆ ಗುರುವಾರ 24 ಗಂಟೆಗಳಲ್ಲಿ 3,797 ಎಲೆಕ್ಟ್ರೋಕಾರ್ಡಿಯೋಗ್ರಾಮ್ (ECG) ಮಾಡಿ ಗಿನ್ನೆಸ್ ದಾಖಲೆ ನಿರ್ಮಿಸಿದೆ.

ನಾರಾಯಣ ಹೆಲ್ತ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ ದೇವಿ ಶೆಟ್ಟಿ, ಆರೋಗ್ಯ ತಪಾಸಣೆ ಮತ್ತು ಹೃದ್ರೋಗಗಳನ್ನು ತಡೆಗಟ್ಟಲು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಏಕೈಕ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗಿದೆ. ಇದು ನಮ್ಮ ತಂಡದ ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸುತ್ತದೆ ಎಂದರು. 

ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಆಚರಣೆಯಿದೆ. ಹೃದ್ರೋಗ ತಜ್ಞರು ಭಾರತದಲ್ಲಿ ಹೆಚ್ಚುತ್ತಿರುವ ಹೃದಯರಕ್ತನಾಳದ ಕಾಯಿಲೆಗಳ ಬಗ್ಗೆ ಜನರಿಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದ್ದಾರೆ. 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಉಚಿತ ಇಸಿಜಿಗಳನ್ನು ಮಾಡಲು ಆಸ್ಪತ್ರೆಯಲ್ಲಿ ಶಿಬಿರ ಆಯೋಜಿಸಲಾಗಿದೆ. 

ಈ ಹಿಂದೆ ಯಾವುದೇ ಆಸ್ಪತ್ರೆಯು ಒಂದೇ ಸೌಲಭ್ಯದಲ್ಲಿ ಇಂತಹ ದಾಖಲೆಯನ್ನು ಪ್ರಯತ್ನಿಸಿಲ್ಲ ಎಂದು ವೈದ್ಯರು ವಿವರಿಸಿದರು. ದಾಖಲೆ ನಿರ್ಮಿಸಲು ದಿನದಲ್ಲಿ 250 ಇಸಿಜಿಗಳನ್ನು ಮಾಡಬೇಕಾಗುತ್ತದೆ, ಇದು ದಿನದ ಮೊದಲ ಕೆಲವು ಗಂಟೆಗಳಲ್ಲಿ ಸಾಧಿಸಲಾಯಿತು.

ವ್ಯಕ್ತಿಯ ಹೃದಯದ ಆರೋಗ್ಯವನ್ನು ಅಧ್ಯಯನ ಮಾಡಲು ಇಸಿಜಿ ಒಂದು ಸರಳ ಹಂತವಾಗಿದೆ. ವೈದ್ಯರು ಹೆಚ್ಚಿನ ತನಿಖೆ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ ಎಂದು ನಾರಾಯಣ ಹೆಲ್ತ್ ಸಿಟಿಯ ವಯಸ್ಕ ಹೃದ್ರೋಗಶಾಸ್ತ್ರದ ಸಲಹೆಗಾರ ಡಾ.ಪ್ರವೀಣ್ ಸದರ್ಮಿನ್ ವಿವರಿಸಿದರು. "ಭಾರತವನ್ನು ಈಗಾಗಲೇ ವಿಶ್ವದ ಮಧುಮೇಹ ರಾಜಧಾನಿ ಎಂದು ಕರೆಯಲಾಗುತ್ತದೆ ಮತ್ತು ಹೃದಯರಕ್ತನಾಳದ ಕಾಯಿಲೆಗಳಿಗೆ ರಾಜಧಾನಿಯಾಗುವ ಸಾಧ್ಯತೆಯಿದೆ, ಅದಕ್ಕೆ ಮೊದಲು ಜನರು ಎಚ್ಚೆತ್ತುಕೊಳ್ಳಬೇಕು ಎಂದರು. 

ಮಾದಕ ವ್ಯಸನ ಮತ್ತು ಉತ್ತಮ ಜೀವನ ಶೈಲಿಯ ಕೊರತೆ ಒತ್ತಡವು ಹೃದಯ ಕಾಯಿಲೆಗಳಿಗೆ ಪ್ರಮುಖ ಅಂಶವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT