ಪ್ರಾತಿನಿಧಿಕ ಚಿತ್ರ 
ರಾಜ್ಯ

ನಾಳೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ 5ನೇ ವಿಶ್ವ ಕಾಫಿ ಸಮ್ಮೇಳನ

ಭಾರತವು ಇದೇ ಮೊದಲ ಬಾರಿಗೆ 'ವಿಶ್ವ ಕಾಫಿ ಸಮ್ಮೇಳನ'ವನ್ನು (ಡಬ್ಲ್ಯುಸಿಸಿ) ಆಯೋಜಿಸುತ್ತಿದ್ದು, ಅದರ ಐದನೇ ಆವೃತ್ತಿಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಆಯೋಜಿಸಲಾಗಿದೆ.

ಬೆಂಗಳೂರು: ಭಾರತವು ಇದೇ ಮೊದಲ ಬಾರಿಗೆ 'ವಿಶ್ವ ಕಾಫಿ ಸಮ್ಮೇಳನ'ವನ್ನು (ಡಬ್ಲ್ಯುಸಿಸಿ) ಆಯೋಜಿಸುತ್ತಿದ್ದು, ಅದರ ಐದನೇ ಆವೃತ್ತಿಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಆಯೋಜಿಸಲಾಗಿದೆ.

ಭಾರತದ ಕಾಫಿ ಮಂಡಳಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ಸರ್ಕಾರ ಮತ್ತು ಕಾಫಿ ಉದ್ಯಮದ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಕಾಫಿ ಸಂಸ್ಥೆ (ಐಸಿಒ) ನಾಲ್ಕು ದಿನಗಳ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

ಕಾರ್ಯಕ್ರಮವನ್ನು ಸೆಪ್ಟೆಂಬರ್ 25 ರಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಉದ್ಘಾಟಿಸಲಿದ್ದಾರೆ ಎಂದು ಭಾರತೀಯ ಕಾಫಿ ಮಂಡಳಿಯ ಸಿಇಒ ಮತ್ತು ಕಾರ್ಯದರ್ಶಿ ಕೆಜಿ ಜಗದೀಶ್ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಕಾಫಿ ಸಮ್ಮೇಳನದಲ್ಲಿ 2400ಕ್ಕೂ ಅಧಿಕ ಪ್ರತಿನಿಧಿಗಳು, 117 ಸ್ಪೀಕರ್‌ಗಳು, 208 ಪ್ರದರ್ಶಕರು, 10,000ಕ್ಕೂ ಹೆಚ್ಚು ಸಂದರ್ಶಕರು ಮತ್ತು 300ಕ್ಕೂ ಹೆಚ್ಚು ಬಿಸಿನೆಸ್ ಟು ಬಿಸಿನೆಸ್ ಸಭೆಗಳು ಒಳಗೊಂಡಂತೆ 80ಕ್ಕೂ ಅಧಿಕ ದೇಶಗಳಿಂದ ಹಲವರನ್ನು ಸೆಳೆಯುವ ನಿರೀಕ್ಷೆಯಿದೆ.

ಡಬ್ಲ್ಯುಸಿಸಿಯ ಹಿಂದಿನ ಆವೃತ್ತಿಗಳು ಇಂಗ್ಲೆಂಡ್ (2001), ಬ್ರೆಜಿಲ್ (2005), ಗ್ವಾಟೆಮಾಲಾ (2010) ಮತ್ತು ಇಥಿಯೋಪಿಯಾ (2016) ದಲ್ಲಿ ನಡೆದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT