ಸಂಗ್ರಹ ಚಿತ್ರ 
ರಾಜ್ಯ

ಕಾವೇರಿದ ಕಾವೇರಿ ಕಿಚ್ಚು: ಮಂಗಳವಾರ ಬೆಂಗಳೂರು ಬಂದ್, ಬಿಎಂಟಿಸಿ-ಕೆಎಸ್ಆರ್'ಟಿಸಿ ಬೆಂಬಲ, ನಗರ ಬಹುತೇಕ ಸ್ಥಬ್ಧ ಸಾಧ್ಯತೆ

ರಾಜ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್'ಗೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬೆಂಬಲ ವ್ಯಕ್ತಪಡಿಸಿವೆ.

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್'ಗೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬೆಂಬಲ ವ್ಯಕ್ತಪಡಿಸಿವೆ.

ಈಗಾಗಲೇ ಬೆಂಗಳೂರು ಬಂದ್'ಗೆ 100ಕ್ಕೂ ಹೆಚ್ಚು ಸಂಘಗಳು, ಓಲಾ, ಉಬರ್ ಚಾಲಕರು ಹಾಗೂ ಮಾಲೀಕರ ಸಂಘಗಳು ಬೆಂಬಲ ಸೂಚಿಸಿದ್ದು, ಇದೀಗ ಕೆಎಸ್ಆರ್'ಟಿಸಿ ಹಾಗೂ ಬಿಎಂಟಿಸಿ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ನಗರ ಮಂಗಳವಾರ ಬಹುತೇಕ ಸ್ಥಬ್ಧಗೊಳ್ಳುವ ಸಾಧ್ಯತೆಗಳಿವೆ.

ಕೆಎಸ್​ಆರ್​ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಅವರು ಮಾತನಾಡಿ, ಬೆಂಗಳೂರು ಬಂದ್​ಗೆ ನಮ್ಮ‌ ಸಂಪೂರ್ಣ ಬೆಂಬಲ ಇರುತ್ತೆ. ಸಾರಿಗೆ ಬಸ್ ರಸ್ತೆ​ಗೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.

ಕೆಎಸ್ಆರ್'ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಿಎಂಟಿಸಿ ಬಸ್ಸುಗಳನ್ನು ಡಿಪೋದಿಂದ ಹೊರಗೆ ತೆಗೆಯುವುದಿಲ್ಲ ಎಂದು ಘೋಷಣೆ ಮಾಡಿದೆ. ಇನ್ನು ಶಾಲಾ ಆಡಳಿತ ಮಂಡಳಿ ಕೂಡ ನೈತಿಕ ಬೆಂಬಲ ಘೋಷಿಸಿದ್ದು, ರಜೆ ಘೋಷಿಸುವ ವಿಚಾರವನ್ನು ಆಯಾ ಶಾಲೆಗಳ ಆಡಳಿತ ಮಂಡಳಿಗೆ ಬಿಟ್ಟಿದೆ.

ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT