ಸುಧಾಮೂರ್ತಿ 
ರಾಜ್ಯ

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ: ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲು

ಇನ್ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ಇನ್ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಸುಧಾಮೂರ್ತಿ ಅವರ ಪರ್ಸನಲ್ ಅಸಿಸ್ಟೆಂಟ್ ಮಮತಾ ಸಂಜಯ್ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಾಗಿದೆ.

ಕೆಕೆಎನ್‌ಸಿ ಯಿಂದ  50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಇಮೇಲ್ ಮೂಲಕ ಅಮೆರಿಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ಸಂದೇಶ ಕಳುಹಿಸಿದ್ದರು. ಈ ನಡುವೆ ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಮೂರ್ತಿ ಟ್ರಸ್ಟ್ ನ ಕಚೇರಿ ಎಂದು ಹೆಸರು ಸೃಷ್ಠಿಸಿ ಸುಧಾಮೂರ್ತಿಯವರ ಅಸಿಸ್ಟೆಂಟ್ ಎಂದು ವಂಚಿಸಿರುವ ಆರೋಪ ಕೇಳಿ ಬಂದಿದೆ. ಆರೋಪಿ ಲಾವಣ್ಯ, ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮೇಡಂ ಬರುತ್ತಾರೆ ಎಂದು ಹೇಳಿ ವಂಚನೆ ಎಸಗಿದ್ದಾರೆ.

ಹೀಗೆ ಅಮೆರಿಕದಲ್ಲಿ ಮೀಟ್ ಅಂಡ್ ಗ್ರೀಟ್ ವಿತ್ ಡಾ. ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಪ್ರತಿ ಟಿಕೆಟ್‌ಗೆ 40 ಡಾಲರ್ ಪಡೆದಿರುವುದಾಗಿ ಆರೋಪಿಸಲಾಗಿದೆ. ಘಟನೆ ಸಂಬಂಧ ಸದ್ಯ ಜಯನಗರ ಠಾಣೆಯಲ್ಲಿ ಐಟಿ ಆಕ್ಟ್ 66ಸಿ, 66ಡಿ ಹಾಗೂ ಐಪಿಸಿ 419, 420 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್ , ಪ್ರವಾಹ ಪರಿಹಾರಕ್ಕೆ ಮನವಿ

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಬೆಂಗಳೂರಿನಿಂದ ತುಮಕೂರಿಗೆ Namma Metro: ಡಿಪಿಆರ್‌ಗೆ ಟೆಂಡರ್‌ ಆಹ್ವಾನಿದ BMRCL; 20 ಸಾವಿರ ಕೋಟಿ ವೆಚ್ಚ; ಎಲ್ಲೆಲ್ಲಿ ನಿಲ್ದಾಣ?

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

Delhi blast: ಪ್ರಮುಖ ಆರೋಪಿಯ ಸಹಚರನನ್ನು ಬಂಧಿಸಿದ NIA

SCROLL FOR NEXT