ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ 
ರಾಜ್ಯ

ಸಾಮಾನ್ಯ ಜ್ಞಾನದಿಂದ ಸೈಬರ್ ಅಪರಾಧವನ್ನು ಎದುರಿಸಬಹುದು: ನಗರ ಪೊಲೀಸ್ ಆಯುಕ್ತ

ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳುವ ಬಗ್ಗೆ ಎಲ್ಲಿಯವರೆಗೆ ಜನರು ನಿರ್ಲಕ್ಷ್ಯ ತೋರುತ್ತಿರುತ್ತಾರೋ ಅಲ್ಲಿಯವರೆಗೂ ಸೈಬರ್‌ ಕ್ರೈಂ ಮುಂದುವರಿಯುತ್ತದೆ ಎಂದು ಪೊಲೀಸ್‌ ಆಯುಕ್ತ ಬಿ ದಯಾನಂದ ಅವರು ಶನಿವಾರ ಹೇಳಿದರು.

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳುವ ಬಗ್ಗೆ ಎಲ್ಲಿಯವರೆಗೆ ಜನರು ನಿರ್ಲಕ್ಷ್ಯ ತೋರುತ್ತಿರುತ್ತಾರೋ ಅಲ್ಲಿಯವರೆಗೂ ಸೈಬರ್‌ ಕ್ರೈಂ ಮುಂದುವರಿಯುತ್ತದೆ ಎಂದು ಪೊಲೀಸ್‌ ಆಯುಕ್ತ ಬಿ ದಯಾನಂದ ಅವರು ಶನಿವಾರ ಹೇಳಿದರು.

ಶನಿವಾರ ನಡೆದ ಮಾಸಿಕ ಜನಸಂಪರ್ಕ ಸಭೆ ಸಂವಾದ ಕಾರ್ಯಕ್ರಮದಲ್ಲಿ ಆಗ್ನೇಯ ವಿಭಾಗದ ವ್ಯಾಪ್ತಿಯ ಕೋರಮಂಗಲ, ಇಲೆಕ್ಟ್ರಾನಿಕ್ ಸಿಟಿ ಮತ್ತು ಮಡಿವಾಳ ನಿವಾಸಿಗಳೊಂದಿಗೆ ಆಯುಕ್ತರು ಮಾತುಕತೆ ನಡೆಸಿದರು.

ಈ ವೇಳೆ ತಮ್ಮ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ, ರಸ್ತೆ ಅಪಘಾತಗಳು ಮತ್ತು ಮಾದಕ ದ್ರವ್ಯ ಸೇವನೆಯ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.

“ಮಾದಕ ದ್ರವ್ಯ ಸೇವನೆಯು ಸಮಾಜಕ್ಕೆ ಅಪಾಯವಾಗಿದೆ. ಸುಲಭ ಲಭ್ಯತೆಯು ಬಳಕೆಯನ್ನು ಸಾಮಾನ್ಯಗೊಳಿಸಿದೆ, ವಿಶೇಷವಾಗಿ ಯುವ ಪೀಳಿಗೆಯಲ್ಲಿ. ಗೆಳೆಯರ ಒತ್ತಡ ಮತ್ತು ಕುತೂಹಲ, ಇತರರ ಪ್ರಭಾವದಿಂದ ಮಾದಕ ದ್ರವ್ಯ ಸೇವನೆ ಮಾಡುತ್ತಿರುವುದು ಹೆಚ್ಚುತ್ತಿದೆ. ಪೊಲೀಸ್ ಇಲಾಖೆಯು ಬೆಂಗಳೂರನ್ನು ಮಾದಕ ದ್ರವ್ಯ ಮುಕ್ತ ನಗರವನ್ನಾಗಿ ಮಾಡಲು ನಿರಂತರವಾಗಿ ಶ್ರಮಿಸುತ್ತಿದೆ. ಈ ಹೋರಾಟಕ್ಕೆ ಜನರ ಒಳಗೊಳ್ಳುವಿಕೆ ಮುಖ್ಯವಾಗುತ್ತದೆ. ಜವಾಬ್ದಾರಿಯುತ ನಾಗರಿಕರಾಗಿ ನಾವು ಮಾದಕ ದ್ರವ್ಯ ಸೇವನೆಯಿಂದ ದೂರವಿರಬೇಕು ಎಂದು ದಯಾನಂದ ಅವರು ಹೇಳಿದರು.
 
ಸೈಬರ್ ಅಪರಾಧ ಪ್ರಕರಣಗಳ ಹೆಚ್ಚಳದ ಕುರಿತು ಮಾತನಾಡಿ, ಸಾಮಾನ್ಯ ಜ್ಞಾನದ ಮಹತ್ವವನ್ನು ಒತ್ತಿ ಹೇಳಿದರು.

ಜೀವನದಲ್ಲಿ ಯಾವುದೂ ಉಚಿತವಾಗಿ ಸಿಗುವುದಿಲ್ಲ. ಜನರು ಇಂತಹ ವಿಷಯಗಳನ್ನು ಸಾಮಾನ್ಯವೆಂದು ತೆಗೆದುಕೊಳ್ಳಬಾರದು. ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವಾಗ ಯಾರನ್ನು ನಂಬಬೇಕು ಎಂಬುದರ ಬಗ್ಗೆ ವಿವೇಚನೆ ಹೊಂದಿರುವುದು ಬಹಳ ಮುಖ್ಯ. ಯಾರಾದರೂ ಸೈಬರ್ ಅಪರಾಧಕ್ಕೆ ಬಲಿಯಾದರೆ, ಅದನ್ನು ತ್ವರಿತವಾಗಿ ವರದಿ ಮಾಡುವುದು ಮುಖ್ಯವಾಗುತ್ತದೆ. ಯಾವುದೇ ಹಣವನ್ನು ಬಹು ಖಾತೆಗಳಿಗೆ ವರ್ಗಾಯಿಸುವ ಮೊದಲು ಪೊಲೀಸರು ತ್ವರಿತವಾಗಿ ತನಿಖೆಯನ್ನು ಪ್ರಾರಂಭಿಸಲು ಮತ್ತು ಮೂಲ ಖಾತೆಯನ್ನು ನಿರ್ಬಂಧಿಸಲು ಇದು ಶಕ್ತಗೊಳಿಸುತ್ತದೆ ಎಂದು ತಿಳಿಸಿದರು.

ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗುವಂತೆ ಮಾಡಲು ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಗಳು ಮತ್ತು ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕೇಂದ್ರಗಳಲ್ಲಿ ಸೈಬರ್ ದೂರುಗಳನ್ನು ದಾಖಲಿಸುವ ಆಯ್ಕೆಯನ್ನು ಕೂಡ ಪರಿಚಯಿಸಿದ್ದೇವೆಂದು ಹೇಳಿದರು.

ಸಂವಾದದ ವೇಳೆ ನಗರದ ಜನತೆ ಟ್ರಾಫಿಕ್ ವ್ಯವಸ್ಥೆ ಬಗ್ಗೆಯೂ ಕಳವಳ ವ್ಯಕ್ತಪಡಿಸಿದರು. ಇದೇ ವೇಳೆ ಹೆಚ್ಚುತ್ತಿರುವ ರಸ್ತೆ ಅಪಘಾತ ಕುರಿತಂತೆಯೂ ಮಾತುಕತೆ ನಡೆಯಿತು.

ಮುಂಜಾಗ್ರತಾ ಕ್ರಮವಾಗಿ ಹಂಪ್‌ಗಳನ್ನು ಗುರುತಿಸಲು ಮತ್ತು ಚಾಲಕರನ್ನು ಮೇಲ್ವಿಚಾರಣೆ ಮಾಡಲುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT