ಸಿಎಂ ಸಿದ್ದರಾಮಯ್ಯ 
ರಾಜ್ಯ

ಕುಕ್ಕರ್ ಹಂಚಿದ್ದಾಗಿ ಪುತ್ರನ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು!

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗಿ ಪರಿಣಮಿಸಿದೆ.

ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗಿ ಪರಿಣಮಿಸಿದೆ.  ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಈಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿವಾಗಿ ಮಡಿವಾಳ ಸಮುದಾಯದ ಮತದಾರರಿಗೆ ಕುಕ್ಕರ್ ಮತ್ತು ಐರನ್ ಬಾಕ್ಸ್ ಗಳನ್ನು. ಇದರಿಂದ ಚುನಾವಣೆ ಗೆದ್ದಿರುವುದರ ಬಗ್ಗೆ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿವಾಳ ಸಮಾಜದ ಉದ್ಘಾಟನಾ ಸಮಾರಂಭದಲ್ಲಿ ಯತೀಂದ್ರ ಈ ವಿಷಯವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಸ್ವಯಂ ಪ್ರೇರಿತವಾಗಿ ಚುನಾವಣೆಯ ಅಪರಾಧವನ್ನು ಎಸಗಿರುತ್ತಾರೆ. ಕಾನೂನನ್ನು ಉಲ್ಲಂಘಿಸಿ ಮತದಾರರಿಗೆ ಆಮಿಷವೊಡ್ಡಿರುವುದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ. ಈ ಖರ್ಚು ವೆಚ್ಚವನ್ನು ಸಹ ಚುನಾವಣೆಯ ಲೆಕ್ಕದಲ್ಲಿ ತೋರಿಸಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್ ಸೇರಿ ಹಲವರು ಠಾಣೆಗೆ ತೆರಳಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ದೂರು ನೀಡಿದ್ದಾರೆ.

ಈ ಹೇಳಿಕೆಯನ್ನ ನಾವು ಹೇಳಿಲ್ಲ. ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಯ ಪುತ್ರ ಹೇಳಿರುವ ಹೇಳಿಕೆಯಿದು. ಈಗಾಗಲೇ ಅವರು ನೀಡಿರುವ ಹೇಳಿಕೆ ಎಲ್ಲಾ ಮಧ್ಯಮಗಳಲ್ಲೂ ಬಿತ್ತರವಾಗಿದೆ ಎಂದು ಬಿಜೆಪಿ ನಾಯಕ ಭಾಸ್ಕರ್ ರಾವ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿ ಅಧಿಕಾರಕ್ಕೆ ಬರಲಾಗಿದೆ ಎಂದು ಆರೋಪಿಸಿ ಈಗಾಗಲೇ ಒಂದು ಪ್ರಕರಣ ದಾಖಲಾಗಿದ್ದು, ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಲಾಗಿತ್ತು. ಇತ್ತೀಚೆಗಷ್ಟೇ ಸಿಎಂ ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT