ವಿನಯ್ ಕುಲಕರ್ಣಿ 
ರಾಜ್ಯ

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್ ನಕಾರ, ಅರ್ಜಿ ವಜಾ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 2016ರ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. 

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 2016ರ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಕುಲಕರ್ಣಿ ಅವರು ಈ ವರ್ಷ ಮೇನಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದಾಗಲೂ ಕ್ಷೇತ್ರ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿತ್ತು. ಇದೀಗ ಶಾಸಕರಾಗಿ ಆಯ್ಕೆಯಾದ ಬಳಿಕ ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ವಿನಯ್ ಕುಲಕರ್ಣಿ ಅವರು ತಾವು ಶಾಸಕರಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಲು ಧಾರವಾಡಕ್ಕೆ ಭೇಟಿ ನೀಡಲು ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಶನಿವಾರ ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಸಿಬಿಐ ಪರ ವಕೀಲ ಪ್ರಸನ್ನಕುಮಾರ್, ವಿನಯ್ ಕುಲಕರ್ಣಿ ಈಗಾಗಲೇ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ ಮತ್ತು ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಹಾಗಾಗಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿ ವಜಾಗೊಳಿಸಿಗೊಳಿಸಬೇಕು ಎಂದು ವಾದ ಮಂಡಿಸಿದ್ದರು.

ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ವರ್ಗಾಯಿಸಿತ್ತು. 8 ಮಂದಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಪ್ರಕರಣದ ಮೊದಲ ಆರೋಪಿ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಇದರಿಂದ ಅವರು ಸುಪ್ರಿಂಕೋರ್ಟ್‌ಗೆ ಮೊರೆ ಹೋಗಿದ್ದರು. 2021ರ ಆಗಸ್ಟ್‌ನಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂಕೋರ್ಟ್, ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ 4 ಷರತ್ತು ವಿಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT