ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

ತುರ್ತು ಚಿಕಿತ್ಸಾ ವಿಭಾಗಗಳನ್ನು ಮೇಲ್ದರ್ಜೆಗೇರಿಸಲಾಗುವುದು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ತುರ್ತು ಸೇವೆಗಳಿಂದ ನಿರ್ಣಾಯಕ ಸಮಯದಲ್ಲಿ ರೋಗಿಗಳ ಜೀವವನ್ನು ಉಳಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ತುರ್ತು ಚಿಕಿತ್ಸಾ ವಿಭಾಗಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದರು.

ಬೆಂಗಳೂರು: ತುರ್ತು ಸೇವೆಗಳಿಂದ ನಿರ್ಣಾಯಕ ಸಮಯದಲ್ಲಿ ರೋಗಿಗಳ ಜೀವವನ್ನು ಉಳಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ತುರ್ತು ಚಿಕಿತ್ಸಾ ವಿಭಾಗಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದರು.

ವೈದೇಹಿ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರದಲ್ಲಿ (ವಿಮ್ಸ್) ಶನಿವಾರ ನಡೆದ 3ನೇ ವಾರ್ಷಿಕ ರಾಜ್ಯ ಮಟ್ಟದ ತುರ್ತು ವೈದ್ಯಕೀಯ ಸಮ್ಮೇಳನವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ರಾಜ್ಯದಲ್ಲಿ ತುರ್ತು ಚಿಕಿತ್ಸಾ ವಿಭಾಗಗಳಿವೆ. ಆದರೆ, ವೈದ್ಯರ ಕೌಶಲ್ಯವನ್ನು ಹೆಚ್ಚಿಸುವ ಹಾಗೂ ತುರ್ತು ಚಿಕಿತ್ಸಾ ವಿಭಾಗಗಳನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದೆ. ಈ ಕುರಿತು ಚರ್ಚೆ ಮತ್ತು ಸಂಶೋಧನೆಯ ಮೂಲಕ ಉತ್ತಮ ಕಲಿಕೆಯ ಅವಕಾಶಗಳನ್ನು ಸೃಷ್ಟಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ವೈದೇಹಿ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರದ ಸಲಹೆಗಾರ ಮತ್ತು ಸಂಶೋಧನಾ ಸಲಹೆಗಾರ ಡಾ.ಮಹೇಶ್ ಕೊತ್ತಪಲ್ಲಿ ಅವರು ಮಾತನಾಡಿ, ಚಿಕಿತ್ಸೆಯ ಗುಣಮಟ್ಟವನ್ನು ಸುಧಾರಿಸಲು ಎಲ್ಲಾ ನಗರಗಳಲ್ಲೂ ಮೂರು ಹಂತದ ಟ್ರಾಮಾ ಸೆಂಟರ್‌ಗಳನ್ನು ಸ್ಥಾಪಿಸಬೇಕೆಂದು ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

CM ಕುರ್ಚಿಗಾಗಿ ಬಣ ಬಡಿದಾಟ: ಸಿದ್ದರಾಮಯ್ಯ vs ಡಿಕೆಶಿ 'ಹೈಡ್ರಾಮ' ಈಗ ದೆಹಲಿಗೆ ಶಿಫ್ಟ್; ಎಲ್ಲರ ಚಿತ್ತ ಹೈಕಮಾಂಡ್ ನತ್ತ!

ಅಸ್ಸಾಂ ವಿಧಾನಸಭೆಯಲ್ಲಿ ಬಹುಪತ್ನಿತ್ವ ನಿಷೇಧ ಮಸೂದೆ ಅಂಗೀಕಾರ; ಬುಡಕಟ್ಟು ಜನಾಂಗಕ್ಕೆ ವಿನಾಯಿತಿ

ಹವಾಯಿ ದ್ವೀಪದಲ್ಲಿ ಮತ್ತೆ ಸ್ಫೋಟಿಸಿದ ಜ್ವಾಲಾಮುಖಿ: ಬರೊಬ್ಬರಿ 400 ಅಡಿ ಎತರಕ್ಕೆ ಚಿಮ್ಮಿದ ಲಾವಾರಸ, ರಣರೋಚಕ ವಿಡಿಯೋ

'ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ಕೆಳಗಿಳಿಸಿದರೆ ನಿಮಗೇ ಅಪಾಯ': ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳ ಖಡಕ್ ಎಚ್ಚರಿಕೆ

SCROLL FOR NEXT