ಕೆಆರ್ ಎಸ್ 
ರಾಜ್ಯ

ಕಾವೇರಿ ಹೋರಾಟದ ನಡುವೆ ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೊರ ಹರಿವು ಹೆಚ್ಚಳ, ಬಂದ್ ಬಗ್ಗೆ ಇಂದು ನಿರ್ಧಾರ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧೆಡೆ ಪ್ರತಿಭಟನೆಯ ನಡುವೆಯೇ ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೊರಹರಿವು ಹೆಚ್ಚಳವಾಗಿದ್ದು, ಭಾನುವಾರ 6,874 ಕ್ಯೂಸೆಕ್ ನೀರು ಬಿಡಲಾಗಿದೆ.

ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧೆಡೆ ಪ್ರತಿಭಟನೆಯ ನಡುವೆಯೇ ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೊರಹರಿವು ಹೆಚ್ಚಳವಾಗಿದ್ದು, ಭಾನುವಾರ 6,874 ಕ್ಯೂಸೆಕ್ ನೀರು ಬಿಡಲಾಗಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ನಿರ್ದೇಶನಗಳಿಗೆ ಬದ್ಧವಾಗಿ ಬಿಡುಗಡೆಯಾದ ನೀರಿನ ನಿಖರವಾದ ಪ್ರಮಾಣದ ಬಗ್ಗೆ ಕಾವೇರಿ ನೀರಾವರಿ ನಿಗಮ ಲಿಮಿಟೆಡ್ ನ ಅಧಿಕಾರಿಗಳು ಮತ್ತು ನೀರಾವರಿ ಅಧಿಕಾರಿಗಳು ಮಾಹಿತಿ ನೀಡದಿದ್ದರೂ ಅಧಿಕೃತ ಅಂಕಿಅಂಶಗಳ ಪ್ರಕಾರ 3,838 ಕ್ಯೂಸೆಕ್ ನೀರನ್ನು ನದಿಗೆ  ಮತ್ತು 3,036 ಕ್ಯೂಸೆಕ್ ನೀರನ್ನು ನಾಲೆಗೆ ಬಿಡಲಾಗಿದೆ. ಸೆಪ್ಟೆಂಬರ್ 27 ರವರೆಗೆ ಪ್ರತಿದಿನ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. 

ಹೊರಹರಿವು 6,874 ಕ್ಯುಸೆಕ್ ಇದ್ದರೆ, ಅಣೆಕಟ್ಟಿನ ಒಳಹರಿವು 6,156 ಕ್ಯೂಸೆಕ್ಕೆ ಕಡಿಮೆಯಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 24 ರಂದು ಅಣೆಕಟ್ಟಿನ ನೇರ ಸಾಮರ್ಥ್ಯ 40.40 ಟಿಎಂಸಿ ಅಡಿಯಾಗಿದ್ದರೆ, ಭಾನುವಾರದಂದು 96. 80 ಅಡಿ ನೀರಿನ ಪ್ರಮಾಣದೊಂದಿಗೆ 12.02 ಟಿಎಂಸಿ ಅಡಿ ಗಳಷ್ಟಿತ್ತು. ಕಳೆದ ವರ್ಷ ಇದೇ ದಿನ 124.38 ಅಡಿಗಳಷ್ಟು ನೀರಿದ್ದು ಅಣೆಕಟ್ಟು ತುಂಬಿತ್ತು.  ಕೆಆರ್‌ಎಸ್ ಅಣೆಕಟ್ಟೆ ಮಾತ್ರವಲ್ಲದೆ ಕಬಿನಿ ಅಣೆಕಟ್ಟೆಯಿಂದಲೂ ನೀರು ಬಿಡಲಾಗಿದೆ. ಭಾನುವಾರ 4,890 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು, ಅದರಲ್ಲಿ 2,500 ಕ್ಯೂಸೆಕ್ ನದಿಗೆ ಹಾಗೂ 2,390 ಕ್ಯೂಸೆಕ್ ನಾಲೆಗಳಿಗೆ ಬಿಡಲಾಗಿದೆ.

ಶುಕ್ರವಾರ ಬಂದ್: ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದ ಹಲವು ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಕನ್ನಡ ಪರ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದು, ಅಧಿಕೃತವಾಗಿ ಬಂದ್ ದಿನವನ್ನು ಘೋಷಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!