ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ. 
ರಾಜ್ಯ

ಬಲವಂತದ ಬಂದ್​ಗೆ ಅವಕಾಶ ಇಲ್ಲ, ನಾಳೆ ನಿಷೇಧಾಜ್ಞೆ ಜಾರಿ; ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಆದರೆ ಬಲವಂತದ ಬಂದ್​ಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಆದರೆ ಬಲವಂತದ ಬಂದ್​ಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಇಂದು ಬಂದ್​ ವಿಚಾರವಾಗಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಆಯುಕ್ತರು, ಬಲವಂತದ ಬಂದ್​ಗೆ ಅವಕಾಶ ಇಲ್ಲ. ಇಂದು ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿ ವರೆಗೆ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. 60 ಕೆಎಸ್​ಆರ್​ಪಿ, 40 ಸಿಎಆರ್ ತುಕಡಿ ನಿಯೋಜನೆ ಮಾಡುತ್ತೇವೆ. ಅಗತ್ಯವಿದ್ದಲ್ಲಿ ತಮಿಳುನಾಡು ಸಾರಿಗೆ ಬಸ್​ಗಳಿಗೆ ಭದ್ರತೆ ಒದಗಿಸುತ್ತೇವೆ. ಪೊಲೀಸರು, ಕೆಎಸ್​ಆರ್​ಪಿ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು, ಹೊಯ್ಸಳ ಪೊಲೀಸರು ಎಲ್ಲರು ಇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಅವಕಾಶ ಇಲ್ಲ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದರೆ ತೊಂದರೆ ಇಲ್ಲ. ಆದರೆ, ಬಲವಂತವಾಗಿ ಬಂದ್ ಮಾಡುವಂತೆ ಇಲ್ಲ ಎಂದು ಬಿ ದಯಾನಂದ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT