ಸಾಂದರ್ಭಿಕ ಚಿತ್ರ 
ರಾಜ್ಯ

ಕೊಡಗಿನಲ್ಲಿ ಬೋಧಕ ಸಿಬ್ಬಂದಿ ಕೊರತೆ: ಪಿಯು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಕೊಡಗಿನ ಸರ್ಕಾರಿ ಜೂನಿಯರ್ ಕಾಲೇಜುಗಳಲ್ಲಿ ಖಾಯಂ ಭೋದಕ ಸಿಬ್ಬಂದಿಯ ಕೊರತೆಯಿಂದ ಕಲಿಕೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಮಡಿಕೇರಿ: ಕೊಡಗಿನ ಸರ್ಕಾರಿ ಜೂನಿಯರ್ ಕಾಲೇಜುಗಳಲ್ಲಿ ಖಾಯಂ ಭೋದಕ ಸಿಬ್ಬಂದಿಯ ಕೊರತೆಯಿಂದ ಕಲಿಕೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಜಿಲ್ಲಾ ಪಿಯು ಮಂಡಳಿಯಲ್ಲಿ ಶೇ.50ಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು, ಸಿಬ್ಬಂದಿ ಕೊರತೆಯ ನಡುವೆಯೇ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಎರಡು ತಿಂಗಳಿಂದ ವೇತನ ನೀಡಿಲ್ಲ.

“ಜಿಲ್ಲೆಯು, ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಜೂನಿಯರ್ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ತೀವ್ರವಾಗಿ ಎದುರಿಸುತ್ತಿದೆ. ಇಷ್ಟು ದೊಡ್ಡ ಪ್ರಮಾಣದ ಸಿಬ್ಬಂದಿ ಕೊರತೆಯಿಂದ ಸಂಸ್ಥೆ ನಡೆಸಲು ನಮಗೆ ಸಾಧ್ಯವಾಗುತ್ತಿಲ್ಲ. ಕೆಲವು ವಿಷಯಗಳಿಗೆ ಸೂಕ್ತ ಅತಿಥಿ ಉಪನ್ಯಾಸಕರು ಸಿಗದೇ ಅಸಹಾಯಕರಾಗಿದ್ದೇವೆ' ಎಂದು ಜಿಲ್ಲೆಯ ಹೆಸರಾಂತ ಜೂನಿಯರ್ ಕಾಲೇಜಿನ ಪ್ರಾಂಶುಪಾಲರೊಬ್ಬರು ಹೇಳಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಹುಡುಕುವುದು ಆಡಳಿತ ಮಂಡಳಿಗೆ ದೊಡ್ಡ ಕೆಲಸವಾಗಿದೆ ಮತ್ತು ಅನೇಕ ವಿಷಯಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಹುಡುಕಲು ಸಾಧ್ಯವಾಗುತ್ತಿಲ್ಲ ಮತ್ತು ಕಂಪ್ಯೂಟರ್ ಸೈನ್ಸ್ ಉಪನ್ಯಾಸಕ ಹುದ್ದೆಗೆ ನೇಮಕ ಮಾಡಿಕೊಳ್ಳಲು ಸೂಕ್ತ ಅಭ್ಯರ್ಥಿಗಳ ಕೊರತೆ ಇದೆ ಎಂದು ಅವರು ತಿಳಿಸಿದ್ದಾರೆ.

ಕೊಡಗಿನಲ್ಲಿ ಸರ್ಕಾರ ಹಾಗೂ ಅನುದಾನಿತ ಕಾಲೇಜುಗಳಿಗೆ ಒಟ್ಟು 149 ಕಾಯಂ ಉಪನ್ಯಾಸಕರ ಹುದ್ದೆಗಳು ಮಂಜೂರಾಗಿವೆ. ಆದಾಗ್ಯೂ, ಇಲಾಖೆಯು ಪ್ರಸ್ತುತ 79 ಖಾಲಿ ಹುದ್ದೆಗಳನ್ನು ಹೊಂದಿದ್ದು, ಶೇ. 53 ರಷ್ಟು ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಮಂಜೂರಾದ ಹುದ್ದೆಗೆ 2020ರಲ್ಲಿ ಕೊನೆಯ ಬಾರಿ ನೇಮಕಾತಿ ನಡೆದಿದ್ದು, ಈಗ ಹಲವಾರು ಉಪನ್ಯಾಸಕರು ನಿವೃತ್ತಿ ಅಥವಾ ವರ್ಗಾವಣೆ ಪಡೆದಿದ್ದಾರೆ. ಹೀಗಾಗಿ ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಅಸಹಾಯಕ ಸ್ಥಿತಿಯಲ್ಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT