ಸಿದ್ದರಾಮಯ್ಯ 
ರಾಜ್ಯ

2034ರಲ್ಲೂ ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗಲ್ಲ; ಸುಳ್ಳು ನಂಬಿಕೊಂಡು ಚಪ್ಪಾಳೆ ಹೊಡಿಬೇಡಿ: ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆಯನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಈಗ ಪ್ರಧಾನಿ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024ರಲ್ಲೂ ಜಾರಿ ಆಗುವುದಿಲ್ಲ.

ಬೆಂಗಳೂರು: ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆಯನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಈಗ ಪ್ರಧಾನಿ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024ರಲ್ಲೂ ಜಾರಿ ಆಗುವುದಿಲ್ಲ. 2029ರಲ್ಲೂ ಜಾರಿ ಆಗುವುದಿಲ್ಲ, 2034ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ  ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ. ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೆ ಇಷ್ಟೊಂದು ಅಡೆತಡೆಗಳನ್ನು ಹಾಕುತ್ತಿರಲಿಲ್ಲ ಎಂದಿದ್ದಾರೆ.

ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಿದ್ದರಿಂದ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಿದ್ದಾರೆ.  ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡಿಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು.

ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಈ ರೀತಿ ಮಹಿಳೆಯರಿಗೆ ವಂಚನೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನು ಕಳುಹಿಸಿದ್ದು? ಮಹಿಳಾ ಮೀಸಲಾತಿ ಬಿಲ್ ಸಿದ್ಧಪಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಇದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ ಶೇ 33 ಮಾತ್ರವಲ್ಲ, ಶೇ 50 ರಷ್ಟು ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರತ್ತೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT