ನಟಿ ಲೀಲಾವತಿ, ವಿನೋದ್ ರಾಜ್ 
ರಾಜ್ಯ

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಪ್ರತಿಭಟನೆ: ಇಳಿ ವಯಸ್ಸಿನಲ್ಲೂ ಹೋರಾಟಕ್ಕಿಳಿದ ಹಿರಿಯ ನಟಿ ಲೀಲಾವತಿ 

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಮಂಡ್ಯದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಬಿಡುವ ಮೂಲಕಆತುರದ ನಿರ್ಧಾರ ಕೈಗೊಂಡು ರಾಜ್ಯದ ರೈತರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದರು.

ನಟಿ ಲೀಲಾವತಿ ಇಳಿ ವಯಸ್ಸಿನಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾದರು. ಮಂಡ್ಯದ ವಿವಿ ಪ್ರತಿಮೆ ಮುಂಭಾಗ ನಡೆಯುತ್ತಿರುವ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ರೈತರ ಜೊತೆ ನಾವಿದ್ದೇವೆ, ನಮ್ಮ ಜನರು ಯಾವಾಗಲು ನಗು‌ನಗುತ್ತಾ ಇರಬೇಕು. ಕಾವೇರಿ ಕಣ್ಣೀರು ಆಗಬಾರದು. ನಮ್ಮ ಜನ ನೀರು ನೀರು ಅಂತ ಕಣ್ಣೀರು ಹಾಕಬಾರದು. ನೀರಿಗೆ ಎಂದು ಬರಬಾರದು.ಕಾವೇರಿ ನೀರು ನಮ್ಮ ಹಕ್ಕು ಎಂದರು. 

 ನಟ ವಿನೋದ್ ರಾಜ್ ಮಾತನಾಡಿ, ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಸಂಕಷ್ಟ ಸೂತ್ರ ಅನಿವಾರ್ಯವಿದೆ. ಕಾನೂನಿಗಿಂತ ನಾವು ದೊಡ್ಡವರಲ್ಲ. ಸುಪ್ರೀಂಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾಸ್ತವ ಸ್ಥಿತಿ ನೋಡಿ ಆದೇಶ ಮಾಡಬೇಕು. ರೈತರ ಹೋರಾಟಕ್ಕೆ ಜಯ ಸಿಗಬೇಕು ಎಂದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT