ನಟಿ ಲೀಲಾವತಿ, ವಿನೋದ್ ರಾಜ್ 
ರಾಜ್ಯ

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಪ್ರತಿಭಟನೆ: ಇಳಿ ವಯಸ್ಸಿನಲ್ಲೂ ಹೋರಾಟಕ್ಕಿಳಿದ ಹಿರಿಯ ನಟಿ ಲೀಲಾವತಿ 

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಮಂಡ್ಯದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಬಿಡುವ ಮೂಲಕಆತುರದ ನಿರ್ಧಾರ ಕೈಗೊಂಡು ರಾಜ್ಯದ ರೈತರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದರು.

ನಟಿ ಲೀಲಾವತಿ ಇಳಿ ವಯಸ್ಸಿನಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾದರು. ಮಂಡ್ಯದ ವಿವಿ ಪ್ರತಿಮೆ ಮುಂಭಾಗ ನಡೆಯುತ್ತಿರುವ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ರೈತರ ಜೊತೆ ನಾವಿದ್ದೇವೆ, ನಮ್ಮ ಜನರು ಯಾವಾಗಲು ನಗು‌ನಗುತ್ತಾ ಇರಬೇಕು. ಕಾವೇರಿ ಕಣ್ಣೀರು ಆಗಬಾರದು. ನಮ್ಮ ಜನ ನೀರು ನೀರು ಅಂತ ಕಣ್ಣೀರು ಹಾಕಬಾರದು. ನೀರಿಗೆ ಎಂದು ಬರಬಾರದು.ಕಾವೇರಿ ನೀರು ನಮ್ಮ ಹಕ್ಕು ಎಂದರು. 

 ನಟ ವಿನೋದ್ ರಾಜ್ ಮಾತನಾಡಿ, ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಸಂಕಷ್ಟ ಸೂತ್ರ ಅನಿವಾರ್ಯವಿದೆ. ಕಾನೂನಿಗಿಂತ ನಾವು ದೊಡ್ಡವರಲ್ಲ. ಸುಪ್ರೀಂಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾಸ್ತವ ಸ್ಥಿತಿ ನೋಡಿ ಆದೇಶ ಮಾಡಬೇಕು. ರೈತರ ಹೋರಾಟಕ್ಕೆ ಜಯ ಸಿಗಬೇಕು ಎಂದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

SCROLL FOR NEXT