ಪ್ರಯಾಣಿಕರಿಲ್ಲದೆ ಬಣಗುಡುತ್ತಿರುವ ಕೆಂಪೇಗೌಡ ಬಸ್ ನಿಲ್ದಾಣ 
ರಾಜ್ಯ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಬಣಗುಡುತ್ತಿರುವ ರಸ್ತೆಗಳು, ವ್ಯಾಪಾರ- ವಹಿವಾಟು ಸ್ತಬ್ಧ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

ಶಾಪಿಂಗ್ ಮಾಲ್ ಗಳು ಕ್ಲೋಸ್ ಆಗಿದ್ದು, ಅವುಗಳ ಮುಂದೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.ವಾಹನಗಳ ದಟ್ಟಣೆಯಿಂದ ತುಂಬಿರುತ್ತಿದ್ದ ರಸ್ತೆಗಳು ಬಣಗುಡುತ್ತಿವೆ, ಸದಾ ಗಿಜಿಗುಡುತ್ತಿದ್ದ ಏರಿಯಾಗಳು ಖಾಲಿ, ಖಾಲಿ ಹೊಡೆಯುತ್ತಿವೆ. 

ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವಿದ್ದರೂ ಪ್ರಯಾಣಿಕರಿಲ್ಲದೆ ಜನದಟ್ಟಣೆ ಪ್ರದೇಶಗಳಾದ ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ತೀರಾ ವಿರಳವಾಗಿದೆ. ಬಂದ್ ನಿಂದಾಗಿ ರಾಜ್ಯದಲ್ಲಿ ಜನದಟ್ಟಣೆಯ ಬಸ್ ನಿಲ್ದಾಣಗಳಲ್ಲಿ ಒಂದಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕಾಣುತ್ತಿಲ್ಲ ಎಂದು ಕಂಡಕ್ಟರೊಬ್ಬರು ಹೇಳಿದರು. 

 ಆಟೋ ಚಾಲಕ ನಾಸೀರ್ ಖಾನ್ ಮಾತನಾಡಿ,ಬಂದ್ ಗೆ ನಮ್ಮ ಬೆಂಬಲವಿದೆ. ಕಾವೇರಿ ವಿಚಾರ ಬಂದಾಗ ನಮ್ಮ ನಿಲುವು ಸ್ಪಷ್ಪವಾಗಿದೆ. ಕರ್ನಾಟಕ ಯಾರಿಗೂ ನೀರು ಒದಗಿಸುವುದಿಲ್ಲ, ಆಟೋಗಳು ಇಂದು ಕಾರ್ಯ ನಿರ್ವಹಿಸಲ್ಲ, ನಾವು ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದರು. 

ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ ಗೆ ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಂದ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವ ಮೂಲಕ ಬಿಗಿ ಭದ್ರತೆ ಒದಗಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!