ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ 
ರಾಜ್ಯ

ಬೆಂಗಳೂರಿನಲ್ಲಿ ಖದೀಮನ ಕೈಚಳಕ: ಮಗಳ ಮದುವೆಗೆ ಕೂಡಿಟ್ಟ 3.5 ಕೆಜಿ ಚಿನ್ನ, 10 ಲಕ್ಷ ರೂ. ನಗದು ಕಳ್ಳತನ!

ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಂದ ಕಳ್ಳನೊಬ್ಬ ಬೀಗ ಮುರಿದು, 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿರುವ ಘಟನೆ ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್​ನಲ್ಲಿ ನಡೆದಿದೆ.

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಂದ ಕಳ್ಳನೊಬ್ಬ ಬೀಗ ಮುರಿದು, 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿರುವ ಘಟನೆ ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್​ನಲ್ಲಿ ನಡೆದಿದೆ.

ಮನೆಯವರೆಲ್ಲ ರಾಮನಗರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಇನ್ನೂ ಕಳ್ಳತನಕ್ಕೆ ಒಳಗಾದ ಮನೆಯವರು ಮಗಳ ಮದುವೆ ಕೂಡ ಫಿಕ್ಸ್ ಮಾಡಿದ್ದರಂತೆ. ಹಾಗಾಗಿ ಆಭರಣ ಹಾಗೂ ಹಣವನ್ನು ಮನೆಯಲ್ಲಿ ಇಟ್ಟು ಹೋಗಿದ್ದರು.

 ರಾಮನಗರದಿಂದ ಮರಳಿ ಮನೆಗೆ ಬಂದು ನೋಡಿದ ಕೂಡಲೇ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಘಟನಾ ಸ್ಥಳಕ್ಕೆ ತಿಲಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಮನೆಗೆ ಓರ್ವ ವ್ಯಕ್ತಿ ಬಂದಿರುವುದು ಗೊತ್ತಾಗಿದೆ. ಸದ್ಯ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿದ್ದ ಕಳ್ಳನಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT