ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ 
ರಾಜ್ಯ

ಬೆಂಗಳೂರಿನಲ್ಲಿ ಖದೀಮನ ಕೈಚಳಕ: ಮಗಳ ಮದುವೆಗೆ ಕೂಡಿಟ್ಟ 3.5 ಕೆಜಿ ಚಿನ್ನ, 10 ಲಕ್ಷ ರೂ. ನಗದು ಕಳ್ಳತನ!

ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಂದ ಕಳ್ಳನೊಬ್ಬ ಬೀಗ ಮುರಿದು, 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿರುವ ಘಟನೆ ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್​ನಲ್ಲಿ ನಡೆದಿದೆ.

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಂದ ಕಳ್ಳನೊಬ್ಬ ಬೀಗ ಮುರಿದು, 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿರುವ ಘಟನೆ ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್​ನಲ್ಲಿ ನಡೆದಿದೆ.

ಮನೆಯವರೆಲ್ಲ ರಾಮನಗರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಇನ್ನೂ ಕಳ್ಳತನಕ್ಕೆ ಒಳಗಾದ ಮನೆಯವರು ಮಗಳ ಮದುವೆ ಕೂಡ ಫಿಕ್ಸ್ ಮಾಡಿದ್ದರಂತೆ. ಹಾಗಾಗಿ ಆಭರಣ ಹಾಗೂ ಹಣವನ್ನು ಮನೆಯಲ್ಲಿ ಇಟ್ಟು ಹೋಗಿದ್ದರು.

 ರಾಮನಗರದಿಂದ ಮರಳಿ ಮನೆಗೆ ಬಂದು ನೋಡಿದ ಕೂಡಲೇ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಘಟನಾ ಸ್ಥಳಕ್ಕೆ ತಿಲಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಮನೆಗೆ ಓರ್ವ ವ್ಯಕ್ತಿ ಬಂದಿರುವುದು ಗೊತ್ತಾಗಿದೆ. ಸದ್ಯ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿದ್ದ ಕಳ್ಳನಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT