ಆದಾಯ ತೆರಿಗೆ ಇಲಾಖೆ ದಾಳಿ 
ರಾಜ್ಯ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್‌; 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌ (Income Tax raid) ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌ (Income Tax raid) ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ನಗರದ ಸರ್‌ ಸಿ.ವಿ. ರಾಮನ್‌ ನಗರ, ಬಾಗ್ಮನೆ ಟೆಕ್‌ ಪಾರ್ಕ್‌, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ.

ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ದಾಳಿ‌ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೆ ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ. ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ.

ಹಲವಾರು ಖಾಸಗಿ ಕಂಪನಿಗಳು ಆದಾಯ ತೆರಿಗೆ ವಂಚನೆ ಮಾಡುವುದಕ್ಕಾಗಿ ಎರಡು ರೀತಿಯ ದಾಖಲೆ ನಿರ್ವಹಣೆ ಮಾಡುತ್ತಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಂಡುಕೊಂಡಿದ್ದರು. ಇದು ವಂಚನೆಯ ಪರಿಧಿಗೆ ಬರುತ್ತಿದ್ದು, ತೆರಿಗೆ ತಪ್ಪಿಸುವ ಹುನ್ನಾರವನ್ನು ಬಯಲು ಮಾಡಲು ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ದೊಡ್ಡ ದೊಡ್ಡ ಕಂಪನಿಗಳು ಕೂಡಾ ಈ ವಂಚನೆಯಲ್ಲಿ ಭಾಗಿಯಾಗಿವೆ ಎನ್ನಲಾಗಿದೆ.

ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ 62.05 ಕೋಟಿ‌ ಮೌಲ್ಯದ ಸರ್ಕಾರಿ ಭೂಮಿ‌ ಜಪ್ತಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ