ಆದಾಯ ತೆರಿಗೆ ಇಲಾಖೆ ದಾಳಿ 
ರಾಜ್ಯ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್‌; 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌ (Income Tax raid) ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌ (Income Tax raid) ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ನಗರದ ಸರ್‌ ಸಿ.ವಿ. ರಾಮನ್‌ ನಗರ, ಬಾಗ್ಮನೆ ಟೆಕ್‌ ಪಾರ್ಕ್‌, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ.

ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ದಾಳಿ‌ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೆ ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ. ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ.

ಹಲವಾರು ಖಾಸಗಿ ಕಂಪನಿಗಳು ಆದಾಯ ತೆರಿಗೆ ವಂಚನೆ ಮಾಡುವುದಕ್ಕಾಗಿ ಎರಡು ರೀತಿಯ ದಾಖಲೆ ನಿರ್ವಹಣೆ ಮಾಡುತ್ತಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಂಡುಕೊಂಡಿದ್ದರು. ಇದು ವಂಚನೆಯ ಪರಿಧಿಗೆ ಬರುತ್ತಿದ್ದು, ತೆರಿಗೆ ತಪ್ಪಿಸುವ ಹುನ್ನಾರವನ್ನು ಬಯಲು ಮಾಡಲು ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ದೊಡ್ಡ ದೊಡ್ಡ ಕಂಪನಿಗಳು ಕೂಡಾ ಈ ವಂಚನೆಯಲ್ಲಿ ಭಾಗಿಯಾಗಿವೆ ಎನ್ನಲಾಗಿದೆ.

ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ 62.05 ಕೋಟಿ‌ ಮೌಲ್ಯದ ಸರ್ಕಾರಿ ಭೂಮಿ‌ ಜಪ್ತಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bus strike-ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ: ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

'ನೀರಾವರಿ ಯೋಜನೆ ಪೂರ್ಣಗೊಳಿಸುವುದು ಸರ್ಕಾರದ ಸಂಕಲ್ಪ: BJP ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ; ಆಂಧ್ರ ಸಹಕಾರ ನೀಡುತ್ತಿಲ್ಲ'

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಭಾರತಕ್ಕೆ UNSC ಸದಸ್ಯತ್ವಕ್ಕೆ ಬ್ರಿಟನ್ ಪ್ರಧಾನಿ Starmer ಬೆಂಬಲ; 2030 ರ ವೇಳೆಗೆ ಬ್ರಿಟನ್ ಜೊತೆಗಿನ ವ್ಯಾಪಾರ ದ್ವಿಗುಣ- Modi

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

SCROLL FOR NEXT