ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಬಂದ್ ವೇಳೆ ಗದ್ದಲ: ಹೋಟೆಲ್‌ನಲ್ಲಿ ಗಲಾಟೆ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು.

ಬೆಂಗಳೂರು: ಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು.
ಬಂಧಿತರನ್ನು ಯೋಗೀಶ್ ಮತ್ತು ಸೋಮಶೇಖರ್ ಎಂದು ಗುರುತಿಸಲಾಗಿದೆ.

ಎಂಟು ಜನರ ಗುಂಪು ಹೋಟೆಲ್‌ಗೆ ನುಗ್ಗಿತು ಮತ್ತು ಹೋಟೆಲ್ ತೆರೆದಿದ್ದಕ್ಕಾಗಿ ಗಾಜು ಮತ್ತು ಪೀಠೋಪಕರಣಗಳನ್ನು ಒಡೆದಿದೆ. ಇದೇ ಗುಂಪು ಇತರ ನಾಲ್ಕು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಇತರ ಆರೋಪಿಗಳ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳು ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಎ. ರಾಮಮೂರ್ತಿ ಅವರ ಸಹಚರರು.

ಬಂದ್ ವೇಳೆ ಹೋಟೆಲ್ ಉಡುಪಿ ಹಬ್ ಅನ್ನು ತೆರೆದಿದ್ದಕ್ಕಾಗಿ ಗುಂಪು ಗಲಾಟೆ ಸೃಷ್ಟಿಸಿದೆ. ಈ ಸಂಬಂಧ ಪೊಲೀಸರು ಈ ಹಿಂದೆ ಇಬ್ಬರನ್ನು ಬಂಧಿಸಿದ್ದರು.

ಬೆಂಗಳೂರು ಬಂದ್ ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಹೋಟೆಲ್ ಮಾಲೀಕರೇ ಹೊಣೆಯಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದರು.

ಬೆಂಗಳೂರು ಬಂದ್ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ 1,000 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿರುವುದಾಗಿ ಬೆಂಗಳೂರು ನಗರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT