ಮೀನುಗಾರರು 
ರಾಜ್ಯ

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್ 

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. 

ಮಂಗಳೂರು: ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. 

ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು,  ದೋಣಿಯಲ್ಲಿದ್ದು ಆಳ ನೀರು ಪ್ರದೇಶದಲ್ಲಿ ಸಿಲುಕಿಕೊಂಡಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಿರ್ಚೆಂದೂರ್ ಮುರುಗನ್ ಬೋಟ್ ನಲ್ಲಿದ್ದ 10 ಮೀನುಗಾರರು ಸೆ.20 ರಂದು ಕಡಲ ಪ್ರದೇಶದಲ್ಲಿ ಪ್ರಯಾಣ ಆರಂಭಿಸಿದ್ದರು. ಆದರೆ ಸೆ.24 ರಂದು ಇಂಜಿನ್ ಶಾಫ್ಟ್ ಸಮಸ್ಯೆಯ ಪರಿಣಾಮ  39 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿ ಮೀನುಗಾರರು ಸಿಲುಕಿದ್ದರು. 

ಅಧಿಕಾರಿಗಳ ಪ್ರಕಾರ, ಮುಂಬೈನ ಕಡಲ ರಕ್ಷಣಾ ಸಮನ್ವಯ ಕೇಂದ್ರ ಸಿಲುಕಿದ್ದ ಮೀನುಗಾರಿಕಾ ದೋಣಿಯಿಂದ ದುರಂತದ ಸಂಕೇತವನ್ನು ಸ್ವೀಕರಿಸಿ ಗುರುವಾರ ಅದನ್ನು ಕರಾವಳಿ ರಕ್ಷಣಾ ಪಡೆ ಜಿಲ್ಲಾ ಕೇಂದ್ರಕ್ಕೆ (ಕರ್ನಾಟಕ) ರವಾನಿಸಿತ್ತು.

ಭಾರತೀಯ ಕೋಸ್ಟ್ ಗಾರ್ಡ್ ಪರಿಸ್ಥಿತಿಯ ತುರ್ತುಸ್ಥಿತಿಯನ್ನು ಗುರುತಿಸಿ, ತಕ್ಷಣವೇ ಕಾರ್ಯಪ್ರವೃತ್ತವಾಗಿದೆ ಮತ್ತು ಸಿಲುಕಿದ್ದ ಮೀನುಗಾರಿಕಾ ದೋಣಿಗೆ ಸಹಾಯ ಮಾಡಲು ಕೋಸ್ಟ್ ಗಾರ್ಡ್ ಹಡಗುಗಳಾದ C-448 ಮತ್ತು C-446 ಅನ್ನು ನಿಯೋಜಿಸಿತ್ತು.

ಸುಧಾರಿತ ನ್ಯಾವಿಗೇಷನ್ ಮತ್ತು ಟೋಯಿಂಗ್ ಸಾಮರ್ಥ್ಯಗಳನ್ನು ಹೊಂದಿರುವ ಈ ಹಡಗುಗಳು ಪ್ರಯಾಣದ ಉದ್ದಕ್ಕೂ "ತಿರುಚೆಂದೂರ್ ಮುರುಗನ್" ನ ಎಳೆಯುವ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT