ಹಲ್ಲೆಗೊಳಗಾದ ಸಿಬ್ಬಂದಿ 
ರಾಜ್ಯ

ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಸಿಬ್ಬಂದಿ ಮೇಲೆ ಹಲ್ಲೆ, ಬ್ಯಾಲೆಟ್‌ ಪೇಪರ್‌ ದೋಚಿದ ದುಷ್ಕರ್ಮಿಗಳು!

ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ತೆರಳುತ್ತಿದ್ದ ಚುನಾವಣಾಧಿಕಾರಿಗಳ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಮತಯಂತ್ರಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಬುಧವಾರ ನಡೆದಿದೆ.

ರಾಮನಗರ: ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ತೆರಳುತ್ತಿದ್ದ ಚುನಾವಣಾಧಿಕಾರಿಗಳ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಮತಯಂತ್ರಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಬುಧವಾರ ನಡೆದಿದೆ. ಅವರನ್ನು ತಡೆಯಲು ಯತ್ನಿಸಿದ ಮಹಿಳಾ ಸಿಬ್ಬಂದಿ ಮೇಲೆಯೂ ದುಷ್ಕರ್ಮಿಗಳು ಕಾರನ್ನು ಚಲಾಯಿಸಲು ಯತ್ನಿಸಿದ್ದಾರೆ.

ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ನಡೆಸಲು  ಹುಲ್ಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಸಿಬ್ಬಂದಿಗಳಾದ ಉಮೇಶ್ ಮತ್ತು ಉಷಾ ಅವರ ಕಾರನ್ನು ಮಾಗಡಿ- ಕುಣಿಗಲ್ ರಸ್ತೆಯ ಕೆಂಚನಹಳ್ಳಿ ಬಳಿ  ಅಡಗಟ್ಟಿದ್ದ ಗ್ಯಾಂಗ್, ಗುರುತಿನ ಚೀಟಿಯನ್ನು ಕೇಳಿ ಚುನಾವಣಾ ಸಿಬ್ಬಂದಿ ಎಂದು ದೃಢಪಡಿಸಿಕೊಂಡ ನಂತರ ಬ್ಯಾಲೆಟ್‌ ಪೇಪರ್‌, ರಬ್ಬರ್ ಸ್ಟ್ಯಾಂಪ್‌ಗಳು, ಚುನಾವಣೆಗೆ ಸಂಬಂಧಿಸಿದ ಇತರ ಸಾಮಗ್ರಿಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಹೊಂದಿದ್ದ ಬ್ಯಾಗ್ ದೋಚಿ ಪರಾರಿಯಾಗಿದೆ. 

ಸಿಬ್ಬಂದಿ ತಡೆಯಲು ಯತ್ನಿಸಿದರಾದರೂ ಆರೋಪಿಗಳು ಕಾರು ಹತ್ತಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಪೈಪೋಟಿಯೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ನಂತರ ಚುನಾವಣೆಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT