ಹಲ್ಲೆಗೊಳಗಾದ ಸಿಬ್ಬಂದಿ 
ರಾಜ್ಯ

ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಸಿಬ್ಬಂದಿ ಮೇಲೆ ಹಲ್ಲೆ, ಬ್ಯಾಲೆಟ್‌ ಪೇಪರ್‌ ದೋಚಿದ ದುಷ್ಕರ್ಮಿಗಳು!

ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ತೆರಳುತ್ತಿದ್ದ ಚುನಾವಣಾಧಿಕಾರಿಗಳ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಮತಯಂತ್ರಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಬುಧವಾರ ನಡೆದಿದೆ.

ರಾಮನಗರ: ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ತೆರಳುತ್ತಿದ್ದ ಚುನಾವಣಾಧಿಕಾರಿಗಳ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಮತಯಂತ್ರಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಬುಧವಾರ ನಡೆದಿದೆ. ಅವರನ್ನು ತಡೆಯಲು ಯತ್ನಿಸಿದ ಮಹಿಳಾ ಸಿಬ್ಬಂದಿ ಮೇಲೆಯೂ ದುಷ್ಕರ್ಮಿಗಳು ಕಾರನ್ನು ಚಲಾಯಿಸಲು ಯತ್ನಿಸಿದ್ದಾರೆ.

ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ನಡೆಸಲು  ಹುಲ್ಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಸಿಬ್ಬಂದಿಗಳಾದ ಉಮೇಶ್ ಮತ್ತು ಉಷಾ ಅವರ ಕಾರನ್ನು ಮಾಗಡಿ- ಕುಣಿಗಲ್ ರಸ್ತೆಯ ಕೆಂಚನಹಳ್ಳಿ ಬಳಿ  ಅಡಗಟ್ಟಿದ್ದ ಗ್ಯಾಂಗ್, ಗುರುತಿನ ಚೀಟಿಯನ್ನು ಕೇಳಿ ಚುನಾವಣಾ ಸಿಬ್ಬಂದಿ ಎಂದು ದೃಢಪಡಿಸಿಕೊಂಡ ನಂತರ ಬ್ಯಾಲೆಟ್‌ ಪೇಪರ್‌, ರಬ್ಬರ್ ಸ್ಟ್ಯಾಂಪ್‌ಗಳು, ಚುನಾವಣೆಗೆ ಸಂಬಂಧಿಸಿದ ಇತರ ಸಾಮಗ್ರಿಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಹೊಂದಿದ್ದ ಬ್ಯಾಗ್ ದೋಚಿ ಪರಾರಿಯಾಗಿದೆ. 

ಸಿಬ್ಬಂದಿ ತಡೆಯಲು ಯತ್ನಿಸಿದರಾದರೂ ಆರೋಪಿಗಳು ಕಾರು ಹತ್ತಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಪೈಪೋಟಿಯೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ನಂತರ ಚುನಾವಣೆಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ