ಸಚಿವ ಚಲುವರಾಯಸ್ವಾಮಿ 
ರಾಜ್ಯ

ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಬುಧವಾರ ರೈತ ಸಂಘಟನೆಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಲುವರಾಯಸ್ವಾಮಿ ಅವರು ಸಭೆ ನಡೆಸಿದರು. ಈ ವೇಳೆ ಅತ್ಯಾಧುನಿಕ ತಂತ್ರಜ್ಞಾನವನ್ನು ರೈತರು ಬಳಸಿಕೊಳ್ಳಬೇಕು ಎಂದು ಹೇಳಿದರು.

ಹೆಚ್ಚು ತಂತ್ರಜ್ಞಾನವನ್ನು ಬಳಸಿ, ಕಡಿಮೆ ನೀರನ್ನು ಬಳಸಿಗೂ ಬೆಳೆಗಳನ್ನು ಬೆಳೆಯಲು ಬಳಸಬಹುದು, ಹನಿ ನೀರಾವರಿ ಮತ್ತು ಕೃಷಿಗೆ ಕಡಿಮೆ ನೀರನ್ನು ಬಳಸಬೇಕು ಎಂದು ತಿಳಿಸಿದರು.

ರೈತರಿಗೆ ಸಹಾಯ ಮಾಡಲು ನ್ಯಾನೋ ಯೂರಿಯಾ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದು ರೈತರಿಗೂ ಲಭ್ಯವಾಗಲಿದೆ. ಕೃಷಿಯಲ್ಲಿ ಡ್ರೋಣ್ ತಂತ್ರಜ್ಞಾನವನ್ನು ಬಳಸಲು ರಾಜ್ಯ ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ ಎಂದರು.

ಇದೇ ವೇಳೆ ಅನ್ನ ಭಾಗ್ಯದಲ್ಲಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ರಾಗಿ, ಶೇಂಗಾ ಮತ್ತಿತರ ಪೌಷ್ಟಿಕಾಂಶದ ಪದಾರ್ಥಗಳನ್ನು ನೀಡುವಂತೆ ರೈತ ಸಂಘಟನೆಗಳು ಸಚಿವರಿಗೆ ಮನವಿ ಮಾಡಿಕೊಂಡರು.

ರೈತರ ಉತ್ಪನ್ನಗಳನ್ನು ಬಲಪಡಿಸಿ, ರೈತರಿಗೆ ಶಾಶ್ವತ ಸಿರಿಧಾನ್ಯ ಮಾರುಕಟ್ಟೆಯನ್ನು ಸ್ಥಾಪಿಸಬೇಕು ಎಂದೂ ಸಚಿವರನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT