ಸಚಿವ ಚಲುವರಾಯಸ್ವಾಮಿ 
ರಾಜ್ಯ

ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಬುಧವಾರ ರೈತ ಸಂಘಟನೆಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಲುವರಾಯಸ್ವಾಮಿ ಅವರು ಸಭೆ ನಡೆಸಿದರು. ಈ ವೇಳೆ ಅತ್ಯಾಧುನಿಕ ತಂತ್ರಜ್ಞಾನವನ್ನು ರೈತರು ಬಳಸಿಕೊಳ್ಳಬೇಕು ಎಂದು ಹೇಳಿದರು.

ಹೆಚ್ಚು ತಂತ್ರಜ್ಞಾನವನ್ನು ಬಳಸಿ, ಕಡಿಮೆ ನೀರನ್ನು ಬಳಸಿಗೂ ಬೆಳೆಗಳನ್ನು ಬೆಳೆಯಲು ಬಳಸಬಹುದು, ಹನಿ ನೀರಾವರಿ ಮತ್ತು ಕೃಷಿಗೆ ಕಡಿಮೆ ನೀರನ್ನು ಬಳಸಬೇಕು ಎಂದು ತಿಳಿಸಿದರು.

ರೈತರಿಗೆ ಸಹಾಯ ಮಾಡಲು ನ್ಯಾನೋ ಯೂರಿಯಾ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದು ರೈತರಿಗೂ ಲಭ್ಯವಾಗಲಿದೆ. ಕೃಷಿಯಲ್ಲಿ ಡ್ರೋಣ್ ತಂತ್ರಜ್ಞಾನವನ್ನು ಬಳಸಲು ರಾಜ್ಯ ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ ಎಂದರು.

ಇದೇ ವೇಳೆ ಅನ್ನ ಭಾಗ್ಯದಲ್ಲಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ರಾಗಿ, ಶೇಂಗಾ ಮತ್ತಿತರ ಪೌಷ್ಟಿಕಾಂಶದ ಪದಾರ್ಥಗಳನ್ನು ನೀಡುವಂತೆ ರೈತ ಸಂಘಟನೆಗಳು ಸಚಿವರಿಗೆ ಮನವಿ ಮಾಡಿಕೊಂಡರು.

ರೈತರ ಉತ್ಪನ್ನಗಳನ್ನು ಬಲಪಡಿಸಿ, ರೈತರಿಗೆ ಶಾಶ್ವತ ಸಿರಿಧಾನ್ಯ ಮಾರುಕಟ್ಟೆಯನ್ನು ಸ್ಥಾಪಿಸಬೇಕು ಎಂದೂ ಸಚಿವರನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT