ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಬಂದ್​: ತಮಿಳು ಸಂಘಟನೆಗಳ ಒಕ್ಕೂಟ ಬೆಂಬಲ!

ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿದ್ದು, ಬಂದ್‌ಗೆ ರಾಜ್ಯದಲ್ಲಿರುವ ತಮಿಳು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬೆಂಗಳೂರು: ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿದ್ದು, ಬಂದ್‌ಗೆ ರಾಜ್ಯದಲ್ಲಿರುವ ತಮಿಳು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ತಮಿಳು ಸಂಘಟನೆಗಳ ಅಧ್ಯಕ್ಷ ಎಸ್ ಫ್ರಾನ್ಸಿಸ್ ಮಾತನಾಡಿ, ಕರ್ನಾಟಕದಲ್ಲಿ ನೆಲೆಸಿರುವ ತಮಿಳು ಮಾತನಾಡುವ ಜನತೆಗೆ ಬೆಂಬಲ ನೀಡಲು ಮತ್ತು ಬಂದ್‌ನಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಯೇ 15 ಲಕ್ಷಕ್ಕೂ ಹೆಚ್ಚು ತಮಿಳು ಮಾತನಾಡುವ ಜನಸಂಖ್ಯೆಯಿದ್ದು, ಎಲ್ಲರಿಗೂ ಕಾವೇರಿ ನೀರಿನ ಸಮಸ್ಯೆಯ ಬಗ್ಗೆ ಅರಿವಿದೆ. ಇಲ್ಲಿನ ತಮಿಳರಿಗೆ ವಾಸ್ತವತೆ ಗೊತ್ತಿದೆ ಹಾಗಾಗಿ ಬಂದ್‌ಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.

ತಮಿಳು-ಕನ್ನಡ ಸೌಹಾರ್ದತೆ ಮತ್ತು ಕ್ಷೇಮಾಭಿವೃದ್ಧಿ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಎನ್ ರಾಮಚಂದ್ರನ್ ಮಾತನಾಡಿ, ಈ ಹಿಂದೆ ಪ್ರತಿಭಟನೆಯ ಲಾಭ ಪಡೆದುಕೊಳ್ಳುತ್ತಿದ್ದ ಕೆಲ ಸಮಾಜ ವಿರೋಧಿಗಳು ತಮಿಳುಗರನ್ನು ಗುರಿಯಾಗಿಸುತ್ತಿದ್ದರು. ಆದರೆ, ಇದೀಗ ಜನರು ಹೆಚ್ಚು ಪ್ರಬುದ್ಧರಾಗಿದ್ದಾರೆ. ಇಂದು ಯಾರೂ ಹಿಂಸೆಯನ್ನು ಆಶ್ರಯಿಸುವುದಿಲ್ಲ ಎಂದು ಹೇಳಿದರು.

ಈ ನಡುವೆ ಕರ್ನಾಟಕದ ತಮಿಳು ಅಸೋಸಿಯೇಷನ್‌ಗಳು ಮತ್ತು ತಮಿಳು ಮಾತನಾಡುವ ನಿವಾಸಿಗಳು ನೀಡಿರುವ ಬೆಂಬಲವನ್ನು ಕನ್ನಡಿಗರು ಸ್ವಾಗತಿಸಿದ್ದಾರೆ.

ಇಲ್ಲಿನ ತಮಿಳರು ಕೂಡ ಕಾವೇರಿ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಬಂದ್‌ಗೆ ಅವರ ಬೆಂಬಲವು ತಮಿಳುನಾಡು ಸರ್ಕಾರಕ್ಕೆ ಬಲವಾದ ಸಂದೇಶವನ್ನು ರವಾನಿಸುತ್ತದೆ. ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

IPL 2026: RCB ವಿರುದ್ಧದ ಹೈ-ವೋಲ್ಟೇಜ್‌ ಪಂದ್ಯಕ್ಕೂ ಮೊದಲೇ ಕಮ್‌ಬ್ಯಾಕ್‌ಗೆ ಸಜ್ಜಾದ ಧೋನಿ!

'Told Dad It's Not Okay': ಬಹಿರಂಗವಾಗಿ ಧೋನಿ, ಕಪಿಲ್ ದೇವ್ ಕ್ಷಮೆಯಾಚಿಸಿದ ಯುವರಾಜ್ ಸಿಂಗ್!

Dhurandhar 2 ಬಾಕ್ಸ್ ಆಫೀಸ್ ಆರ್ಭಟಕ್ಕೆ ಬೆದರಿದ 'ಭೂತ್ ಬಂಗ್ಲಾ'; ಬಿಡುಗಡೆ ಏಪ್ರಿಲ್ 16ಕ್ಕೆ ಮುಂದೂಡಿಕೆ

SCROLL FOR NEXT