ಡಿಸಿಎಂ ಡಿಕೆ ಶಿವಕುಮಾರ್, ಈಶ್ವರ್ ಖಂಡ್ರೆ ಮಾತುಕತೆ 
ರಾಜ್ಯ

ಸಚಿವ ಈಶ್ವರ ಖಂಡ್ರೆ, ಡಿಕೆಶಿ ಭೇಟಿ: ಗೋದಾವರಿ, ಮೆಹಕರ್ ಸೇರಿ ಹಲವು ಯೋಜನೆಗಳ ಬಗ್ಗೆ ಚರ್ಚೆ

ಗೋದಾವರಿ ನದಿಯ ನೀರು ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಸಮರ್ಪಕವಾಗಿ ಬಳಕೆ ಆಗಬೇಕಿದ್ದು, ನಮ್ಮ ಪಾಲಿನ  23 ಟಿ.ಎಂ.ಸಿ ನೀರು ಉಪಯೋಗಿಸಿಕೊಳ್ಳಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಗೋದಾವರಿ ನದಿಯ ನೀರು ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಸಮರ್ಪಕವಾಗಿ ಬಳಕೆ ಆಗಬೇಕಿದ್ದು, ನಮ್ಮ ಪಾಲಿನ  23 ಟಿ.ಎಂ.ಸಿ ನೀರು ಉಪಯೋಗಿಸಿಕೊಳ್ಳಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಗೃಹ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಸಮಾಲೋಚಿಸಿದ ಈಶ್ವರ ಖಂಡ್ರೆ, ಈಗಾಗಲೇ ಕಾರಂಜಾ ಜಲಾಶಯ, ಅತಿವಾಳ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ತಮ್ಮ ಸ್ವಕ್ಷೇತ್ರ ಭಾಲ್ಕಿ ತಾಲೂಕಿನ ನೀರಾವರಿ ಪ್ರದೇಶ ಹೆಚ್ಚಳ ಮಾಡಲಾಗಿದೆ. ಮೆಹಕರ್ ಏತ ನೀರಾವರಿ ಯೋಜನೆ ಕಾರ್ಯಗತಗೊಳಿಸಬೇಕಿದೆ ಎಂದರು.

ಕಾರಂಜಾ ಯೋಜನೆಗೆ ಹಲವು ವರ್ಷಗಳ ಹಿಂದೆ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ದೊರಕಿಲ್ಲ ಎಂಬ ಬೇಡಿಕೆ ಇದೆ.  ಕಾರಂಜಾ ಸಂತ್ರಸ್ತರ ದೀರ್ಘ ಕಾಲದ ಬೇಡಿಕೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಒಂದು ಬಾರಿಯ ಆಧಾರದ ಮೇಲೆ ಪರಿಹರಿಸಬೇಕಿದೆ ಮತ್ತು ಬೀದರ್ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಕಾರ್ಯಗತಗೊಳಿಸಬೇಕಿದೆ ಎಂಬ ಅಂಶವನ್ನು ಗಮನಕ್ಕೆ ತಂದರು.

ಕಲ್ಯಾಣ ಕರ್ನಾಟಕ ಭಾಗದ ವಿವಿಧ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವ ಮತ್ತು ಬಾಕಿ ಇರುವ ಯೋಜನೆ ಆರಂಭಿಸುವ ಕುರಿತಂತೆಯೂ ಸಮಾಲೋಚಿಸಿದರು.

ಪಕ್ಷ ಸಂಘಟನೆಗೆ ಒತ್ತು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ ಆದ ಈಶ್ವರ ಖಂಡ್ರೆ, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತ್ತು ಲೋಕಸಭಾ ಚುನಾವಣೆಗೆ ಅಣಿಗೊಳಿಸುವ ಕುರಿತಂತೆಯೂ ಗಂಭೀರ ಚರ್ಚೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT