ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ 
ರಾಜ್ಯ

'ಬುರ್ಖಾ ಧರಿಸಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ: ವಾಟಾಳ್ ನಾಗರಾಜ್ ಏನೆಂದರು?

ಮಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರು: ಮಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸ ಮುಂದೆ ಪ್ರತಿಭಟನೆ ನಡೆಸಿದ ಅವರು, ಕರ್ನಾಟಕ ತಮಿಳು ನಾಡಿಗೆ ಕದ್ದು ನೀರು ಬಿಡುತ್ತಿದೆ ಎಂದು ಸಾಂಕೇತಿಸಲು ಈ ಕಪ್ಪು ಬಣ್ಣ ಧರಿಸಿದ್ದೇನೆ, ಇನ್ನು ಬುರ್ಖಾ ಮಹಿಳೆಯರ ನ್ಯಾಯದ,ಸಮಾನತೆಯ ಸಂಕೇತವಾಗಿದೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

ಇಂದು ಕರ್ನಾಟಕ ಬಂದ್ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರವಾಗಿದೆ. ಈಗಾಗಲೇ ಹಲವು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಪೊಲೀಸ್ ಭದ್ರತೆ ನಿಯೋಜಿಸಿ ಕರ್ನಾಟಕ ಬಂದ್​ ಅನ್ನು​​ ಹತ್ತಿಕ್ಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಕಾವೇರಿ ನೀರಿಗಾಗಿ ನಾವು ಕರೆ ನೀಡಿರುವ ಬಂದ್​​ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಂದ್​ಗೆ ಸಹಕಾರ ನೀಡಿದ ರಾಜ್ಯದ ಜನತೆ ಧನ್ಯವಾದ ತಿಳಿಸುತ್ತೇನೆ. ಪೊಲೀಸರು ನಮ್ಮ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಪೊಲೀಸ್ ಗೂಂಡಾಗಿರಿ, ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಶಾಂತಿಯುತವಾಗಿ ಪ್ರತಿಭಟನೆ, ಮೆರವಣಿಗೆ ಮಾಡಿದರೇ ತಪ್ಪಾ, ಟೌನ್​​​ಹಾಲ್​ ಮುಂದೆ ಪ್ರತಿಭಟನೆಗೆ ಅವಕಾಶ ನೀಡದೆ ದೌರ್ಜನ್ಯವೆಸಗಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT