ಪ್ರಾತಿನಿಧಿಕ ಚಿತ್ರ 
ರಾಜ್ಯ

ಉಡುಪಿ: ಜನವರಿಯಿಂದ ಆಗಸ್ಟ್‌ ನಡುವೆ 11,000ಕ್ಕೂ ಹೆಚ್ಚು ನಾಯಿ ಕಡಿತ ಪ್ರಕರಣಗಳು, ಇಬ್ಬರು ಸಾವು

ಉಡುಪಿ ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿದ್ದು, 2023ರ ಜನವರಿ ಮತ್ತು ಆಗಸ್ಟ್ ನಡುವೆ ಎಂಟು ತಿಂಗಳಲ್ಲಿ 11,407 ಪ್ರಕರಣಗಳು ವರದಿಯಾಗಿವೆ ಎಂದು ಅಧಿಕೃತ ಅಂಕಿ ಅಂಶಗಳು ಬಹಿರಂಗಪಡಿಸಿವೆ. ಜಿಲ್ಲೆಯಲ್ಲಿ ಎಂಟು ತಿಂಗಳಲ್ಲಿ ನಾಯಿ ಕಡಿತದಿಂದ ಇಬ್ಬರು ಸಾವಿಗೀಡಾಗಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿದ್ದು, 2023ರ ಜನವರಿ ಮತ್ತು ಆಗಸ್ಟ್ ನಡುವೆ ಎಂಟು ತಿಂಗಳಲ್ಲಿ 11,407 ಪ್ರಕರಣಗಳು ವರದಿಯಾಗಿವೆ ಎಂದು ಅಧಿಕೃತ ಅಂಕಿ ಅಂಶಗಳು ಬಹಿರಂಗಪಡಿಸಿವೆ. ಜಿಲ್ಲೆಯಲ್ಲಿ ಎಂಟು ತಿಂಗಳಲ್ಲಿ ನಾಯಿ ಕಡಿತದಿಂದ ಇಬ್ಬರು ಸಾವಿಗೀಡಾಗಿದ್ದಾರೆ.

ಸ್ಥಳೀಯ ಅಧಿಕಾರಿಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಈ ಬಗ್ಗೆ ಅಸಡ್ಡೆ ಹೊಂದಿದ್ದು, ಜಿಲ್ಲೆಯ ಹಲವು ಭಾಗಗಳಲ್ಲಿ ಬೀದಿ ನಾಯಿಗಳಿಗೆ ಸರಿಯಾಗಿ ಆಹಾರ ನೀಡದಿರುವುದು ನಾಯಿ ಕಡಿತ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ.

ಸ್ಥಳೀಯ ನಗರ ಸಂಸ್ಥೆಗಳಾದ ಸಿಎಂಸಿ, ಟಿಎಂಸಿ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಇನ್ನೂ ನಿರಂತರವಾಗಿ ಸರಿಯಾದ ರೀತಿಯಲ್ಲಿ ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ಕಾರ್ಯಕ್ರಮಗಳನ್ನು ಕೈಗೊಳ್ಳಬೇಕಿದೆ. 

ಸಂತಾನ ಶಕ್ತಿ ಹರಣ ಮತ್ತು ಎಬಿಸಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ನಡೆಸಬೇಕು. ಪಶುಸಂಗೋಪನಾ ಇಲಾಖೆಯು ಜಿಲ್ಲೆಯಾದ್ಯಂತ ಪಂಚಾಯಿತಿಗಳಿಗೆ ಅಗತ್ಯ ತಾಂತ್ರಿಕ ಬೆಂಬಲ ನೀಡುವ ಮೂಲಕ ಸಹಕಾರ ನೀಡಲು ಸಿದ್ಧವಿದೆ ಎಂದು ಉಡುಪಿ ಜಿಲ್ಲೆಯ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ ಶಂಕರ್ ಶೆಟ್ಟಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಸಂತಾನಶಕ್ತಿ ಹರಣ ಮತ್ತು ಎಬಿಸಿ ಕಾರ್ಯಕ್ರಮಕ್ಕೆ ಟೆಂಡರ್‌ ಕರೆಯಲಾಗಿದ್ದರೂ, ಹೆಚ್ಚಿನ ಎನ್‌ಜಿಒಗಳು ಮುಂದೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಗ್ರಾಮ ಪಂಚಾಯಿತಿಗಳು ಎಬಿಸಿ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಸೂಕ್ತ ಕ್ರಿಯಾ ಯೋಜನೆಯಿಂದ ಅಗತ್ಯ ಅನುದಾನ ಮೀಸಲಿಡಬೇಕು.

ನಾಯಿ ಕಚ್ಚಿದಾಗ ಜನರು ತಕ್ಷಣವೇ ಅಗತ್ಯ ಚಿಕಿತ್ಸೆ ಪಡೆಯಬೇಕು. ಚಿಕಿತ್ಸೆ ತಡವಾದರೆ ಸಂಕೀರ್ಣ ಸಮಸ್ಯೆಗಳು ಎದುರಾಗುತ್ತವೆ. ಸರ್ಕಾರಿ ಆರೋಗ್ಯ ಕೇಂದ್ರಗಳು ಉತ್ತಮ ಚಿಕಿತ್ಸೆ ನೀಡುತ್ತಿವೆ ಎಂದು ಉಡುಪಿ ಡಿಎಚ್‌ಒ ಡಾ. ನಾಗಭೂಷಣ ಉಡುಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT