ವಿದ್ಯಾರ್ಥಿಯೊಂದಿಗೆ ಸಚಿವ ಜಮೀರ್ ಅಹ್ಮದ್ ಖಾನ್. 
ರಾಜ್ಯ

ಕರಾಟೆ ಚಾಂಪಿಯನ್ ಶಿಪ್: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ಬಹುಮಾನ ನೀಡಿದ ಸಚಿವ ಜಮೀರ್

ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು 50 ಸಾವಿರ ರೂ. ಬಹುಮಾನ ನೀಡಿದರು.

ಬೆಂಗಳೂರು: ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು 50 ಸಾವಿರ ರೂ. ಬಹುಮಾನ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಪದಕ ಗೆದ್ದ ಮೊಹಮದ್ ತಾಹೀರ್‌ಗೆ ನಗದು ಬಹುಮಾನ ನೀಡಿ ಸನ್ಮಾನಿಸಿದರು.

ಕಳೆದ ತಿಂಗಳು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೋಷಕರೊಂದಿಗೆ ಬಂದಿದ್ದ ತಾಹೀರ್, “ನಾನು ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದು, ಪಾಲ್ಗೊಳ್ಳಲು ಆರ್ಥಿಕ ಸಂಕಷ್ಟ ಎದುರಾಗಿದೆ. ನಮ್ಮ ತಂದೆ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದು ಅಷ್ಟು ಹಣ ಹೊಂದಿಸಲು ಆಗುತ್ತಿಲ್ಲ” ಎಂದು ಹೇಳಿದ್ದ. ಆಗ ಈ ವಿದ್ಯಾರ್ಥಿಗೆ ಸಚಿವರು 65 ಸಾವಿರ ರೂ. ವಿಮಾನಯಾನ ಟಿಕೆಟ್ ಮಾಡಿಸಿಕೊಟ್ಟಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಬ್ಬಾಳದ ಕ್ರೆಸೆಂಟ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಹೀರ್ ಚಿನ್ನದ ಪದಕ ಗೆದ್ದು ಬಂದಿದ್ದಾನೆ.

ಇದರಂತೆ ಚಿನ್ನದ ಪದಕ ಗೆದ್ದ ಬಳಿಕ ಸಚಿವರ ಬಳಿ ಬಂದಿದ್ದ ತಾಹೀರ್ ಪೋಷಕರು, ನೀವು ಸಹಾಯ ಮಾಡಿದ್ದಕ್ಕೆ ನಮ್ಮ ಮಗ ಸ್ಪರ್ಧೆಯಲ್ಲಿ ಭಾಗಿಯಾಗಿ ಬಂಗಾರಗ ಪದಕ ಗೆಲ್ಲುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

ಈ ವೇಳೆ ವಿದ್ಯಾರ್ಥಿಗೆ 50 ಸಾವಿರ ನಗದು ಬಹುಮಾನ ನೀಡಿದ ಸಚಿವರು, ನಿಮ್ಮ ಮಗನ ಸಾಧನೆ ಹೆಮ್ಮೆಯ ವಿಷಯ ಎಂದು ಹೇಳಿದರು.

ವಿಶೇಷ ಚೇತನರ ಪರ ಕೆಲಸ ಮಾಡುವ ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ ಸಚಿವರು ವೈಯಕ್ತಿಕವಾಗಿ ಎರಡು ಲಕ್ಷ ರೂ. ನೆರವನ್ನು ಇದೇ ಸಂದರ್ಭದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ, ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್, ಮುಖಂಡರಾದ ಜಿ. ಎ. ಬಾವಾ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT