ವಿದ್ಯಾರ್ಥಿಯೊಂದಿಗೆ ಸಚಿವ ಜಮೀರ್ ಅಹ್ಮದ್ ಖಾನ್. 
ರಾಜ್ಯ

ಕರಾಟೆ ಚಾಂಪಿಯನ್ ಶಿಪ್: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ಬಹುಮಾನ ನೀಡಿದ ಸಚಿವ ಜಮೀರ್

ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು 50 ಸಾವಿರ ರೂ. ಬಹುಮಾನ ನೀಡಿದರು.

ಬೆಂಗಳೂರು: ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು 50 ಸಾವಿರ ರೂ. ಬಹುಮಾನ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಪದಕ ಗೆದ್ದ ಮೊಹಮದ್ ತಾಹೀರ್‌ಗೆ ನಗದು ಬಹುಮಾನ ನೀಡಿ ಸನ್ಮಾನಿಸಿದರು.

ಕಳೆದ ತಿಂಗಳು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೋಷಕರೊಂದಿಗೆ ಬಂದಿದ್ದ ತಾಹೀರ್, “ನಾನು ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದು, ಪಾಲ್ಗೊಳ್ಳಲು ಆರ್ಥಿಕ ಸಂಕಷ್ಟ ಎದುರಾಗಿದೆ. ನಮ್ಮ ತಂದೆ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದು ಅಷ್ಟು ಹಣ ಹೊಂದಿಸಲು ಆಗುತ್ತಿಲ್ಲ” ಎಂದು ಹೇಳಿದ್ದ. ಆಗ ಈ ವಿದ್ಯಾರ್ಥಿಗೆ ಸಚಿವರು 65 ಸಾವಿರ ರೂ. ವಿಮಾನಯಾನ ಟಿಕೆಟ್ ಮಾಡಿಸಿಕೊಟ್ಟಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಬ್ಬಾಳದ ಕ್ರೆಸೆಂಟ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಹೀರ್ ಚಿನ್ನದ ಪದಕ ಗೆದ್ದು ಬಂದಿದ್ದಾನೆ.

ಇದರಂತೆ ಚಿನ್ನದ ಪದಕ ಗೆದ್ದ ಬಳಿಕ ಸಚಿವರ ಬಳಿ ಬಂದಿದ್ದ ತಾಹೀರ್ ಪೋಷಕರು, ನೀವು ಸಹಾಯ ಮಾಡಿದ್ದಕ್ಕೆ ನಮ್ಮ ಮಗ ಸ್ಪರ್ಧೆಯಲ್ಲಿ ಭಾಗಿಯಾಗಿ ಬಂಗಾರಗ ಪದಕ ಗೆಲ್ಲುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

ಈ ವೇಳೆ ವಿದ್ಯಾರ್ಥಿಗೆ 50 ಸಾವಿರ ನಗದು ಬಹುಮಾನ ನೀಡಿದ ಸಚಿವರು, ನಿಮ್ಮ ಮಗನ ಸಾಧನೆ ಹೆಮ್ಮೆಯ ವಿಷಯ ಎಂದು ಹೇಳಿದರು.

ವಿಶೇಷ ಚೇತನರ ಪರ ಕೆಲಸ ಮಾಡುವ ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ ಸಚಿವರು ವೈಯಕ್ತಿಕವಾಗಿ ಎರಡು ಲಕ್ಷ ರೂ. ನೆರವನ್ನು ಇದೇ ಸಂದರ್ಭದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ, ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್, ಮುಖಂಡರಾದ ಜಿ. ಎ. ಬಾವಾ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT