ವಿದ್ಯಾರ್ಥಿಯೊಂದಿಗೆ ಸಚಿವ ಜಮೀರ್ ಅಹ್ಮದ್ ಖಾನ್. 
ರಾಜ್ಯ

ಕರಾಟೆ ಚಾಂಪಿಯನ್ ಶಿಪ್: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ಬಹುಮಾನ ನೀಡಿದ ಸಚಿವ ಜಮೀರ್

ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು 50 ಸಾವಿರ ರೂ. ಬಹುಮಾನ ನೀಡಿದರು.

ಬೆಂಗಳೂರು: ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು 50 ಸಾವಿರ ರೂ. ಬಹುಮಾನ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಪದಕ ಗೆದ್ದ ಮೊಹಮದ್ ತಾಹೀರ್‌ಗೆ ನಗದು ಬಹುಮಾನ ನೀಡಿ ಸನ್ಮಾನಿಸಿದರು.

ಕಳೆದ ತಿಂಗಳು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೋಷಕರೊಂದಿಗೆ ಬಂದಿದ್ದ ತಾಹೀರ್, “ನಾನು ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದು, ಪಾಲ್ಗೊಳ್ಳಲು ಆರ್ಥಿಕ ಸಂಕಷ್ಟ ಎದುರಾಗಿದೆ. ನಮ್ಮ ತಂದೆ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದು ಅಷ್ಟು ಹಣ ಹೊಂದಿಸಲು ಆಗುತ್ತಿಲ್ಲ” ಎಂದು ಹೇಳಿದ್ದ. ಆಗ ಈ ವಿದ್ಯಾರ್ಥಿಗೆ ಸಚಿವರು 65 ಸಾವಿರ ರೂ. ವಿಮಾನಯಾನ ಟಿಕೆಟ್ ಮಾಡಿಸಿಕೊಟ್ಟಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಬ್ಬಾಳದ ಕ್ರೆಸೆಂಟ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಹೀರ್ ಚಿನ್ನದ ಪದಕ ಗೆದ್ದು ಬಂದಿದ್ದಾನೆ.

ಇದರಂತೆ ಚಿನ್ನದ ಪದಕ ಗೆದ್ದ ಬಳಿಕ ಸಚಿವರ ಬಳಿ ಬಂದಿದ್ದ ತಾಹೀರ್ ಪೋಷಕರು, ನೀವು ಸಹಾಯ ಮಾಡಿದ್ದಕ್ಕೆ ನಮ್ಮ ಮಗ ಸ್ಪರ್ಧೆಯಲ್ಲಿ ಭಾಗಿಯಾಗಿ ಬಂಗಾರಗ ಪದಕ ಗೆಲ್ಲುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

ಈ ವೇಳೆ ವಿದ್ಯಾರ್ಥಿಗೆ 50 ಸಾವಿರ ನಗದು ಬಹುಮಾನ ನೀಡಿದ ಸಚಿವರು, ನಿಮ್ಮ ಮಗನ ಸಾಧನೆ ಹೆಮ್ಮೆಯ ವಿಷಯ ಎಂದು ಹೇಳಿದರು.

ವಿಶೇಷ ಚೇತನರ ಪರ ಕೆಲಸ ಮಾಡುವ ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ ಸಚಿವರು ವೈಯಕ್ತಿಕವಾಗಿ ಎರಡು ಲಕ್ಷ ರೂ. ನೆರವನ್ನು ಇದೇ ಸಂದರ್ಭದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ, ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್, ಮುಖಂಡರಾದ ಜಿ. ಎ. ಬಾವಾ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?