ಕೋಲಾರದ ಬ್ರಹ್ಮೋತ್ಸವ 
ರಾಜ್ಯ

ಕೆಜಿಎಫ್‌: ವಿಜೃಂಭಣೆಯ ಬ್ರಹ್ಮೋತ್ಸವ, ಲಕ್ಷಾಂತರ ಭಕ್ತರು ಭಾಗಿ!

ಕೋಲಾರ ಜಿಲ್ಲೆಯ ಗಣಿ ಪ್ರದೇಶವಾದ ಕೆಜಿಎಫ್ ನಲ್ಲಿ ಈ ಬಾರಿಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ವಿಜೃಂಭಣೆಯಿಂದ ನೆರವೇರಿತು. ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾದರು.

ಕೋಲಾರ: ಕೋಲಾರ ಜಿಲ್ಲೆಯ ಗಣಿ ಪ್ರದೇಶವಾದ ಕೆಜಿಎಫ್ ನಲ್ಲಿ ಈ ಬಾರಿಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ವಿಜೃಂಭಣೆಯಿಂದ ನೆರವೇರಿತು. ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾದರು. ಮಾರ್ಚ್ 19 ರಿಂದ 31 ರವರೆಗೆ 13 ದಿನಗಳ ಕಾಲ ಯಾವುದೇ ಅಡ್ಡಿಯಿಲ್ಲದೆ ಸುಗಮವಾಗಿ ಬ್ರಹ್ಮೋತ್ಸವ ಜರುಗಿತು.

ಈ ವರ್ಷ ಎಲ್ಲಾ ಹದಿಮೂರು ಉತ್ಸವ ಸಮಿತಿ ಸದಸ್ಯರು ಶಾಸ್ತ್ರೀಯ ಸಂಗೀತ ಕಚೇರಿ ಒಳಗೊಂಡಂತೆ ಅದ್ಧೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದರು. ಉತ್ಸವವನ್ನು ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿನಿಂದ ಸಾವಿರಾರು ಜನರು ಆಗಮಿಸಿದ್ದರು. ಇದು ಕೆಜಿಎಫ್ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆದರೆ, ಸ್ಥಳೀಯ ಪೊಲೀಸ್ ಆಡಳಿತ ಮೊದಲ ದಿನವೇ ಬಿಗಿ ಬಂದೋಬಸ್ತ್ ಮಾಡಿದ್ದು, ಜನಸಾಗರವೇ ಹರಿದುಬರುವ ಮುನ್ನವೇ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರ ನೇರ ಉಸ್ತುವಾರಿಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಪ್ರಮುಖ ಬೀದಿಗಳಲ್ಲದೆ, ಅಡ್ಡ ರಸ್ತೆಗಳಲ್ಲಿಯೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಉಪ ಪೊಲೀಸ್ ವರಿಷ್ಠಾಧಿಕಾರಿ ಪಾಂಡುರಂಗಯ್ಯ, ಸರ್ಕಲ್ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಹಾಗೂ ಇತರೆ ಪೊಲೀಸ್ ಸಿಬ್ಬಂದಿ ಹಗಲಿರುಳು ಶ್ರಮಿಸಿ ಕಾರ್ಯಕ್ರಮವನ್ನು ಸುಸೂತ್ರವಾಗಿ ನೆರವೇರಿಸಿದರು. ಈ ಪ್ರಯತ್ನಕ್ಕೆ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕ ರವಿಕಾಂತೇಗೌಡರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸರಿಗೆ ಉತ್ಸವ ಸಮಿತಿ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT