ಪಿಸಿ ಮೋಹನ್ ನಾಮಪತ್ರ ಸಲ್ಲಿಕೆ
ಪಿಸಿ ಮೋಹನ್ ನಾಮಪತ್ರ ಸಲ್ಲಿಕೆ 
ರಾಜ್ಯ

ಕರ್ನಾಟಕ ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಉಮೇದುವಾರಿಕೆ; ಯದುವೀರ್, ಸೋಮಣ್ಣ, ಮೋಹನ್ ನಾಮಪತ್ರ ಸಲ್ಲಿಕೆ

Shilpa D

ಬೆಂಗಳೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಶುಭ ಗಳಿಗೆ ಸಿಕ್ಕಿದ್ದರಿಂದ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ರಾಜ್ಯ ಮಟ್ಟದ ನಾಯಕರು ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಯದುವೀರ್ ನಾಮಪತ್ರ ಸಲ್ಲಿಕೆ

ಇನ್ನೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಪಿಸಿ ಮೋಹನ್ ಗೆ ಸಾಥ್‌ ನೀಡಿದರು.

ತುಮಕೂರಿನಲ್ಲಿ ವಿ.ಸೋಮಣ್ಣ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರೊಂದಿಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.

ವಿ.ಸೋಮಣ್ಣ
SCROLL FOR NEXT