ಪಿಸಿ ಮೋಹನ್ ನಾಮಪತ್ರ ಸಲ್ಲಿಕೆ 
ರಾಜ್ಯ

ಕರ್ನಾಟಕ ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಉಮೇದುವಾರಿಕೆ; ಯದುವೀರ್, ಸೋಮಣ್ಣ, ಮೋಹನ್ ನಾಮಪತ್ರ ಸಲ್ಲಿಕೆ

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಶುಭ ಗಳಿಗೆ ಸಿಕ್ಕಿದ್ದರಿಂದ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ರಾಜ್ಯ ಮಟ್ಟದ ನಾಯಕರು ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಯದುವೀರ್ ನಾಮಪತ್ರ ಸಲ್ಲಿಕೆ

ಇನ್ನೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಪಿಸಿ ಮೋಹನ್ ಗೆ ಸಾಥ್‌ ನೀಡಿದರು.

ತುಮಕೂರಿನಲ್ಲಿ ವಿ.ಸೋಮಣ್ಣ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರೊಂದಿಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.

ವಿ.ಸೋಮಣ್ಣ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT