ಗೋವಿಂದ ಕಾರಜೋಳ 
ರಾಜ್ಯ

'ಗೋ ಬ್ಯಾಕ್ ಕಾರಜೋಳ' ಅಭಿಯಾನ: ಬಿಜೆಪಿ ಬಂಡಾಯಗಾರರಿಗೆ ಎಂಎಲ್‌ಸಿ ಎಚ್ಚರಿಕೆ

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಬಂಡಾಯ ಬಿಜೆಪಿ ಸದಸ್ಯರು ಗೋ ಬ್ಯಾಕ್ ಕಾರಜೋಳ ಹೇಳಿಕೆ ಮುಂದುವರಿಸಿದರೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಂಎಲ್ ಸಿ ಕೆಎಸ್ ನವೀನ್ ಎಚ್ಚರಿಕೆ ನೀಡಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಗೋವಿಂದ್ ಕಾರಜೋಳ ವಿರುದ್ಧ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಬಂಡಾಯ ಬಿಜೆಪಿ ಸದಸ್ಯರು ಗೋ ಬ್ಯಾಕ್ ಕಾರಜೋಳ ಹೇಳಿಕೆ ಮುಂದುವರಿಸಿದರೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಂಎಲ್ ಸಿ ಕೆಎಸ್ ನವೀನ್ ಎಚ್ಚರಿಕೆ ನೀಡಿದ್ದಾರೆ.

ಏಪ್ರಿಲ್ 4 ರಂದು ಕಾರಜೋಳ ನಾಮಪತ್ರ ಸಲ್ಲಿಸಲಿದ್ದು, ಏಪ್ರಿಲ್ 12 ರಂದು ಹೊಳಲ್ಕೆರೆಯಲ್ಲಿ ಮೆಗಾ ಪ್ರಚಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರಲ್ಲಿ 50,000 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನವೀನ್ ಹೇಳಿದರು.

ಚಂದ್ರಪ್ಪ ಅವರು ತಮ್ಮ ಪುತ್ರ ರಘು ಚಂದನ್‌ಗೆ ಟಿಕೆಟ್ ಬಯಸಿದ್ದರು, ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದ ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿತು ಎಂದು ಚಂದ್ರಪ್ಪ ಆರೋಪಿಸಿದ್ದರು. ಪಕ್ಷದ ಸೋಶಿಯಲ್ ಇಂಜಿನಿಯರಿಂಗ್ ಯೋಜನೆಯಂತೆ ಮಾದಿಗ ಸಮುದಾಯದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸಮರ್ಥಿಸಿಕೊಂಡರು. ಏಪ್ರಿಲ್ 12 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರದುರ್ಗಕ್ಕೆ ಬರುತ್ತಿದ್ದು, ನಂತರ ಈ ಬಗ್ಗೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT