ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ 
ರಾಜ್ಯ

ಬೆಂಗಳೂರು: ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ವಿಡಿಯೋ ದಾಖಲು!

ಬೆಚ್ಚಿ ಬೀಳಿಸುವಂತಹ ಹಲ್ಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದ್ದು, ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ದೃಶ್ಯಾವಳಿಗಳು ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ದಾಖಲಾಗಿದೆ.

ಬೆಂಗಳೂರು: ಬೆಚ್ಚಿ ಬೀಳಿಸುವಂತಹ ಹಲ್ಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದ್ದು, ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ದೃಶ್ಯಾವಳಿಗಳು ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ದಾಖಲಾಗಿದೆ.

ಹೌದು.. ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್‌ನಿಂದ ಇಬ್ಬರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಲ್ಯಾಣ್ ನಗರದಲ್ಲಿ ನಡೆದಿದೆ. ಮೂಲಗಳ ಪ್ರಕಾರ ಮಾರ್ಚ್ 31ರಂದು ಹೆಣ್ಣೂರು - ಬಾಣಸವಾಡಿ ನಡುವಿನ ಹೊರ ವರ್ತುಲ ರಸ್ತೆಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡುತ್ತಿರುವ ದೃಶ್ಯಗಳು ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದರ ಡ್ಯಾಶ್​ಬೋರ್ಡ್​ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಹರಿಕೃಷ್ಣನ್.ಪಿ ಎಂಬವರು ಈ ದೃಶ್ಯಗಳನ್ನು ತಮ್ಮ ಇನ್‌ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಘಟನೆಯಿಂದ ನಗರದ ಜನರು ಸುರಕ್ಷತೆ, ಕಾನೂನು ಸುವ್ಯವಸ್ಥೆಯ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ವಿಡಿಯೋವನ್ನು ನಗರ ಪೊಲೀಸ್ ಇಲಾಖೆಯ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ವಿಡಿಯೋಗೆ ಪ್ರತಿಕ್ರಿಯಿಸಿದ ಪೊಲೀಸ್ ಇಲಾಖೆ

ವೈರಲ್ ಆಗಿರುವ ವಿಡಿಯೋ ಕುರಿತು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಪ್ರತಿಕ್ರಿಯಿಸಿ, ''ಗಾಯಾಳು ಅಥವಾ ಹಲ್ಲೆ ಮಾಡಿರುವ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದೇವೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ಗಾಯಾಳುಗಳ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ'' ಎಂದಿದ್ದಾರೆ.

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel