ಸಂಗ್ರಹ ಚಿತ್ರ 
ರಾಜ್ಯ

ಚಾಮರಾಜನಗರ: ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ವಿಫಲ

ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಮಾಡುವಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ.

ಚಾಮರಾಜನಗರ: ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಮಾಡುವಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ.

ಮಾರ್ಚ್ 29 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯ ರಸ್ತೆಯ ಪಕ್ಕದಲ್ಲಿ ದಂಡ ಮುರಿದ ಸ್ಥಿತಿಯಲ್ಲಿ ಆನೆ ಬಿದ್ದಿರುವುದು ಪತ್ತೆಯಾಗಿತ್ತು.

ವೇಗವಾಗಿ ಬಂದ ವಾಹನವೊಂದು ಆನೆಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಇದರಂತೆ ಆನೆಗೆ ಡಿಕ್ಕಿ ಹೊಡೆದ ವಾಹನದ ಪತ್ತೆಗೆ ಶ್ವಾನ ದಳವನ್ನೂ ನೇಮಿಸಲಾಗಿತ್ತು. ಆದರೆ ರಕ್ತದ ಕಲೆಗಳು ಸ್ವಲ್ಪ ದೂರದಲ್ಲಿ ಮಾತ್ರ ಕಂಡುಬಂದ ಹಿನ್ನೆಲೆಯಲ್ಲಿ ವಾಹನ ಪತ್ತೆ ಯಶಸ್ವಿಯಾಗಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ನಡೆದಿರುವುದು ಅರಣ್ಯ ಪ್ರದೇಶದ ಹೊರಭಾಗವಾಗಿದ್ದರಿದ, ಸುತ್ತಮುತ್ತ ಯಾವುದೇ ಸಿಸಿಟಿವಿ ಕ್ಯಾಮೆರಾಗಳು ಇಲ್ಲದ ಕಾರಣ ವಾಹನ ಪತ್ತೆ ಕಷ್ಟಕವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT