ಕಾಳಿಂಗ ಸರ್ಪ ರಕ್ಷಣೆ ಮಾಡುತ್ತಿರುವುದು. 
ರಾಜ್ಯ

ಆಗುಂಬೆ ಬಳಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪ ರಕ್ಷಣೆ; ವಿಡಿಯೋ!

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಸುಮಾರು 12.5 ಕೆಜಿ ತೂಕದ ಮತ್ತು ಬರೋಬ್ಬರಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ.

ಶಿವಮೊಗ್ಗ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಸುಮಾರು 12.5 ಕೆಜಿ ತೂಕದ ಮತ್ತು ಬರೋಬ್ಬರಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ.

ಕಾಳಿಂಗ ಸರ್ಪವನ್ನು ಹರ್ಪಿಟಾಲಜಿಸ್ಟ್ ಡಾ.ಪಿ.ಗೌರಿ ಶಂಕರ್ ಅವರು ರಕ್ಷಣೆ ಮಾಡಿದ್ದಾರೆ. ಕಿಂಗ್ ಕೋಬ್ರಾ ವಿಶ್ವದ ಅತಿ ಉದ್ದದ ವಿಷಪೂರಿತ ಹಾವುಗಳಾಗಿದ್ದು, ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಈ ಹಾವುಗಳು ಹೆಚ್ಚಾಗಿ ಕಂಡು ಬರುತ್ತವೆ. ಥೈಲ್ಯಾಂಡ್‌ನಲ್ಲಿ 18 ಅಡಿಗಳಷ್ಟು ಉದ್ದವನ್ನು ಹಾವುಗಳಿವೆ. ಆದರೆ ಪ್ರಸ್ತುತ ಆಗುಂಬೆ ಬಳಿ ಪತ್ತೆಯಾಗಿರುವುದು ಭಾರತದಲ್ಲಿ ಅಪರೂಪದ ಹಾವುಗಳಾಗಿವೆ.

ಫೆಬ್ರುವರಿಯಿಂದ ಮೇ ತಿಂಗಳು ಸಂತಾನೋತ್ಪತ್ತಿ ಅವಧಿಯಾಗಿದ್ದು, ಈ ಹಾವುಗಳು ತನ್ನ ಸಂಗಾತಿಯನ್ನು ಅರಸಿ ಹೊರಬರುತ್ತವೆ. ಇದರಿಂದಾಗಿ ಈ ಸಂದರ್ಭದಲ್ಲಿ ಮಾನವ-ಹಾವುಗಳ ಸಂಘರ್ಷ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಕಳಿಂಗ ಫೌಂಡೇಶನ್‌ಗೆ ಹೆಚ್ಚಿನ ಕರೆಗಳು ಬರುತ್ತವೆ ಎಂದು ಡಾ ಶಂಕರ್ ಹೇಳಿದ್ದಾರೆ.

ಆಗುಂಬೆಯಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ನಾಡ್ಪಾಲ್ ಗ್ರಾಮದ ಭಾಸ್ಕರ್ ಶೆಟ್ಟಿ ಎಂಬವರಿಂದ ಕರೆ ಬಂದಿತ್ತು. ಈ ವೇಳೆ ಪ್ರಶಾಂತ್ ಅವರೊಂದಿಗೆ ಸ್ಥಳಕ್ಕೆ ತೆರಳಿದಾಗ ಹಾವನ್ನು ಕಂಡು ಬೆರಗಾಗಿದೆ.

ಈ ಹಾವುಗಳ ಸರಾಸರಿ ತೂಕವು ಸಾಮಾನ್ಯವಾಗಿ 3.5 ರಿಂದ 7 ಕಿಲೋಗ್ರಾಂಗಳವರೆಗೆ ಇರುತ್ತದೆ, ಹೆಣ್ಣು 2 ರಿಂದ 3.5 ಕಿಲೋಗ್ರಾಂಗಳಷ್ಟು ಮತ್ತು ಗಂಡು 3.5 ರಿಂದ 6 ಕಿಲೋಗ್ರಾಂಗಳಷ್ಟು ತೂಕವಿರುತ್ತದೆ. ಆದರೆ, ಪ್ರಸ್ತುತ ರಕ್ಷಣೆ ಮಾಡಿದ ಹಾವು 12.5 ಕಿಲೋಗ್ರಾಂಗಳಷ್ಟು ತೂಕವನ್ನು ಹೊಂದಿದ್ದು, ಸುಮಾರು 15 ಅಡಿ ಉದ್ದವಿದೆ. ಇಷ್ಟು ದೊಡ್ಡ ಗಾತ್ರದ ಕಾಳಿಂಗ ಸರ್ಪ ಇಡೀ ಭಾರತದಲ್ಲೇ ಸಿಗುವುದು ಅಪರೂಪ. ಈ ಹಾವುಗಳ ಪತ್ತೆ ಮಲೆನಾಡು ಪ್ರದೇಶದಲ್ಲಿ ಬೆಳೆಯುತ್ತಿರುವ ಆರೋಗ್ಯಕರ ಬೆಳವಣಿಗೆಯನ್ನು ತೋರಿಸುತ್ತದೆ ಎಂದು ಶಂಕರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT