ಓಯೋ ರೂಮ್ online desk
ರಾಜ್ಯ

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು OYO Room ಮೊರೆ ಹೋದ ವ್ಯಕ್ತಿ!: ಸಂಸ್ಥೆಯ ಪ್ರತಿಕ್ರಿಯೆ ಹೀಗಿದೆ...

ಭಾರತದ ಸ್ಟಾರ್ಟ್ ಅಪ್ ಕ್ಯಾಪಿಟಲ್ ಬೆಂಗಳೂರಿನಲ್ಲಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಗರದಲ್ಲಿ ವಾಸಿಸುತ್ತಿರುವ ವ್ಯಕ್ತಿಯೋರ್ವ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ OYO Room ಮೊರೆ ಹೋಗಿದ್ದಾರೆ.

ಬೆಂಗಳೂರು: ಭಾರತದ ಸ್ಟಾರ್ಟ್ ಅಪ್ ಕ್ಯಾಪಿಟಲ್ ಬೆಂಗಳೂರಿನಲ್ಲಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಗರದಲ್ಲಿ ವಾಸಿಸುತ್ತಿರುವ ವ್ಯಕ್ತಿಯೋರ್ವ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ OYO Room ಮೊರೆ ಹೋಗಿದ್ದಾರೆ.

ರಿಷಭ್ ಶ್ರೀವಾಸ್ತವ ಬೆಂಗಳೂರಿನ ಪರಿಸ್ಥಿತಿಯನ್ನು ಚಿಲ್ ನಿಂದ ಗ್ರಿಲ್ ಗೆ ಬದಲಾಗಿರುವುದನ್ನು ಹೋಲಿಕೆ ಮಾಡಿದ್ದಾರೆ. ನಗರದಲ್ಲಿ ಬಿಸಿಲಿನ ತಾಪಮಾನದಿಂದ ಹೊರಬರಲು ರಿಷಭ್ ಶ್ರೀವಾಸ್ತವ OYO Room ಗೆ ತೆರಳಿದ್ದಾರೆ. ಹವಾನಿಯಂತ್ರಿತ ವ್ಯವಸ್ಥೆ ಇಲ್ಲದೇ ನಗರದಲ್ಲಿ ಜೀವಿಸುವುದು ಅಸಾಧ್ಯವಾಗುತ್ತಿದೆ ಆದ್ದರಿಂದ OYO Room ಗೆ ಬಂದಿರುವುದಾಗಿ ರಿಷಭ್ ಶ್ರೀವಾಸ್ತವ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ರಿಷಭ್ ಶ್ರೀವಾಸ್ತವ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ OYO Rooms ಅಧಿಕೃತ ಖಾತೆ, ಬೆಂಗಳೂರಿಗೆ ಸ್ವಾಭಾವಿಕ ಹವಾನಿಯಂತ್ರಿತ ನಗರ ಎಂಬ ಹೆಸರಿತ್ತು, ಸ್ವಾಭಾವಿಕವಾಗಿ ವಾತಾವರಣವನ್ನು ತಂಪಾಗಿಡುವ ಕೆಲಸವಾಗುತ್ತಿತ್ತು. ಆದರೆ ಈಗ ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಲಘುಧಾಟಿಯಲ್ಲಿ ನಗರದ ವಾತಾವರಣ ಬದಲಾವಣೆಯ ಬಗ್ಗೆ ಹೇಳಿದೆ.

OYO ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಿತೇಶ್ ಅಗರ್ವಾಲ್ ಕೂಡ ಕಂಪನಿಯ ಅಧಿಕೃತ ಖಾತೆಯ ನಿಲುವನ್ನು ಬೆಂಬಲಿಸಿದ್ದಾರೆ ಮತ್ತು ಪೋಸ್ಟ್ ನ್ನು ಮರುಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT