ಹೈಕೋರ್ಟ್ 
ರಾಜ್ಯ

ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: 3 ಜಿಲ್ಲೆಗಳ 30 ಮಂದಿಗೆ ಡಿಸಿಗಳಿಂದ ನೋಟಿಸ್‌ ಜಾರಿ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಕಬ್ಬಲಿಗ ಜಾತಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಆನಂತರ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ಬೆಂಗಳೂರು: ಕಬ್ಬಲಿಗ ಜಾತಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಆನಂತರ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿಯ ಯಾದಗಿರಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಿಶೇಷ ವಕೀಲ ಸಿ ಜಗದೀಶ್‌ ಅವರು ಹೈಕೋರ್ಟ್‌ ನಿರ್ದೇಶನದ ಅನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲೆ ಓ ಅಶ್ವಿನಿ ಅವರು ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ 6ರಿಂದ 7 ಸಾವಿರ ಜನರ ಬಗ್ಗೆ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಇವರೆಲ್ಲರ ವಿರುದ್ಧ ಕ್ರಮದ ಅಗತ್ಯವಿದೆ ಎಂದು ಕೋರಿದರು.

ನಕಲಿ ಜಾತಿ ಪ್ರಮಾಣ ಪಡೆದುಕೊಂಡಿರುವವರ ವಿರುದ್ಧ ಮೂರು ವಾರಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ಪೀಠವು ವಿಚಾರಣೆಯನ್ನು ಜೂನ್ 11ಕ್ಕೆ ಮುಂದೂಡಿತು.

ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪ ಜಾತಿಯಾದ ಪರಿವಾರ ಹಾಗೂ ತಳವಾರ ಬೋಯಿ ಉಪ ಪಂಗಡದವರಿಗೂ ಪರಿಶಿಷ್ಟ ಪಂಗಡದ (ಎಸ್‌ಟಿ) ನಕಲಿ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬುದು ಅರ್ಜಿದಾರರ ಮನವಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT