ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ತಾತ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮೊಮ್ಮಗ; ಪೋಷಕರ ಆಕ್ರಂದನ!

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಮೀಪ ಜಮೀನಿನಲ್ಲಿ ಕೊರೆಸಿದ್ದ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದಿರುವ ಘಟನೆ ನಡೆದಿದೆ.

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಮೀಪ ಜಮೀನಿನಲ್ಲಿ ಕೊರೆಸಿದ್ದ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದಿರುವ ಘಟನೆ ನಡೆದಿದೆ.

ನಿನ್ನೆ ಕೊಳವೆ ಬಾವಿಯನ್ನು ಕೊರೆಸಲಾಗಿತ್ತು. ಆದರೆ ನೀರು ಬರದ ಹಿನ್ನಲೆಯಲ್ಲಿ ಅದನ್ನು ಹಾಗೆ ಬಿಡಲಾಗಿತ್ತು. ಶಂಕರಪ್ಪ ಅವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದರು. ಇಂದು ಆಟವಾಡಲು ಹೋಗಿದ್ದ ವೇಳೆ ಶಂಕರಪ್ಪ ಅವರ ಮೊಮ್ಮಗ ಸ್ವಾತಿಕ್ ಆಯತಪ್ಪಿ ಬೋರ್ ವೆಲ್ ಗೆ ಬಿದ್ದಿದ್ದಾನೆ. ಸಾತ್ವಿಕ್ ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ ಆರಂಭಿಸಲಾಗಿದೆ.

ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಸಹಾಯಕ ಕಮಿಷನರ್ ಅಬಿದ್ ಗದ್ಯಾಲ್ ಅವರು, ಸಂಜೆ 6 ಗಂಟೆ ಸುಮಾರಿಗೆ ಬಾಲಕ ಬಿದ್ದಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಕಂದಾಯ ಅಧಿಕಾರಿಗಳು, ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಸಿಬ್ಬಂದಿಯ ತಂಡವನ್ನು ರವಾನಿಸಿದ್ದೇವೆ. ವೈದ್ಯರು ಆಮ್ಲಜನಕದ ಪೂರೈಕೆಯನ್ನೂ ಮಾಡುತ್ತಿದ್ದಾರೆ. ಇದಲ್ಲದೇ, ಈಗಾಗಲೇ ಜೆಸಿಬಿಗಳು ಸಮಾನಾಂತರವಾಗಿ ಅಗೆಯುವ ಕೆಲಸ ಆರಂಭಿಸಲಾಗಿದೆ ಎಂದರು.

ಪ್ರಾಥಮಿಕ ವರದಿಯ ಪ್ರಕಾರ, ಬಾಲಕ ಸುಮಾರು 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾನೆ ಎಂದು ಗದ್ಯಾಲ್ ಹೇಳಿದ್ದಾರೆ. ಬಾಲಕನನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT