ಸಾಂದರ್ಭಿಕ ಚಿತ್ರ 
ರಾಜ್ಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಕಲಬುರಗಿ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್!

ಕಲಬುರಗಿಯ ಶ್ರೀಶರಣಬಸವೇಶ್ವರ ಜಾತ್ರೆಯ ಅಂಗವಾಗಿ ಅನ್ನದಾಸೋಹ ಕಾರ್ಯಾಕ್ರಮವನ್ನು ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬ್ರಹ್ಮಪೂರದ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರ ಆಯೋಜಿಸಲಾಗಿತ್ತು.

ಕಲಬುರಗಿ: ಲೋಕಸಭೆ ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿ ಎಂಎಲ್ಸಿ ಬಿ ಜಿ ಪಾಟೀಲ್, ಬಿಜೆಪಿ ನಗರ ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದು ಪಾಟೀಲ್ (ಎಂಎಲ್ಸಿ ಬಿ ಜಿ ಪಾಟೀಲ್ ಅವರ ಪುತ್ರ) ಮತ್ತು ಒಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಅಧಿಕಾರಿ ಭೀಮರಾಯ ಗುರುಪಾದಪ್ಪ ಸಲ್ಲಿಸಿದ್ಗ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ನ್ಯಾಯಾಲಯದಿಂದ ಅನುಮತಿ ಪಡೆದು ಕಲಬುರಗಿಯ ಕಲ್ಯಾಣಿ ಪೆಟ್ರೋಲ್‌ ಪಂಪ್‌ ಬಳಿ ಶಾಮಿಯಾನ ಹಾಕಲಾಗಿದ್ದು, ಅದರಲ್ಲಿ ಬ್ಯಾನರ್‌ ಹಾಕಲಾಗಿತ್ತು.

ಕಲಬುರಗಿಯ ಶ್ರೀಶರಣಬಸವೇಶ್ವರ ಜಾತ್ರೆಯ ಅಂಗವಾಗಿ ಅನ್ನದಾಸೋಹ ಕಾರ್ಯಾಕ್ರಮವನ್ನು ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬ್ರಹ್ಮಪೂರದ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರ ಆಯೋಜಿಸಲಾಗಿತ್ತು.

ಅನ್ನದಾಸೋಹದ ಬ್ಯಾನರ್‍ನಲ್ಲಿ ಬಿ.ಜೆ.ಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಹಾಗೂ ಬಿ.ಜೆ.ಪಿ ನಗರ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಇನ್ನಿತರ ನಾಯಕರ ಭಾವ ಚಿತ್ರಗಳನ್ನು ಹಾಕಿ ಅನ್ನ ದಾಸೋಹ ಏರ್ಪಡಿಸಲಾಗಿತ್ತು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.30ರಂದು ನಡೆದ ಶರಣಬಸವೇಶ್ವರ ಜಾತ್ರೆ ನಿಮಿತ್ತ ಬಿಜೆಪಿ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಅನ್ನಸಂತರ್ಪಣೆ ಮಾಡಿದರು. ನ್ಯಾಯಾಲಯದಿಂದ ಅನುಮತಿ ಪಡೆದು ಕಲಬುರಗಿಯ ಕಲ್ಯಾಣಿ ಪೆಟ್ರೋಲ್‌ ಪಂಪ್‌ ಬಳಿ ಶಾಮಿಯಾನ ಹಾಕಲಾಗಿತ್ತು, ಆದರೆ ಬ್ಯಾನರ್‌ ನಲ್ಲಿ ಬಿಜೆಪಿ ರಾಜಕೀಯ ವ್ಯಕ್ತಿಗಳ ಬ್ಯಾನರ್ ಹಾಕಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿತ್ತು. ಹೀಗಾಗಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT